ಸಂಗ್ರಹ ಚಿತ್ರ 
ರಾಜ್ಯ

ಹಾಸನ ಜಿಲ್ಲೆಯ ಸುತ್ತಮುತ್ತ ಲಘು ಭೂಕಂಪನ

ಜಿಲ್ಲೆಯ ಹಳೇಬೀಡು, ಅಡಗೂರು, ಸಾಲಗಾಮೆ ಹಾಗೂ ಹಾಸನದ ಕೆಲವೆಡೆಗಳಲ್ಲಿ ಶುಕ್ರವಾರ ಸಂಜೆ ಭೂಮಿ ಅದುರಿದ ಅನುಭವವಾಗಿದೆ. 

ಹಾಸನ: ಜಿಲ್ಲೆಯ ಹಳೇಬೀಡು, ಅಡಗೂರು, ಸಾಲಗಾಮೆ ಹಾಗೂ ಹಾಸನದ ಕೆಲವೆಡೆಗಳಲ್ಲಿ ಶುಕ್ರವಾರ ಸಂಜೆ ಭೂಮಿ ಅದುರಿದ ಅನುಭವವಾಗಿದೆ. 

ಹಾಸನ ನಗರ ಮಾತ್ರವಲ್ಲದೆ ವಿಶ್ವವಿಖ್ಯಾತ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ದ್ಯಾವಪ್ಪನಹಳ್ಳಿ, ನಿಂಗಪ್ಪನಕೊಪ್ಪಲು ಸೇರಿ ಹಲವೆಡೆ ಭೂಕಂಪನ ಅನುಭವವಾಗಿದೆ. ಇದರಿಂದ ಆತಂಕಗೊಂಡ ನಿವಾಸಿಗಳು ಮನೆಯ ಹೊರಗಡೆ ಓಡಿ ಬಂದಿದ್ದಾರೆ. ಜನರು ನೀಡಿದ ಮಾಹಿತಿ ಮೇಲೆ ಸ್ಥಳಕ್ಕೆ ಹಳೆಬೀಡು ಪೊಲೀಸರು ಭೇಟಿ ನೀಡಿದ್ದಾರೆ.

ಹಾಸನ ನಗರ ಸುತ್ತಮುತ್ತ 5 ಗಂಟೆ 28  ನಿಮಿಷದ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೇಲೂರು ಸುತ್ತಮುತ್ತ ಸಂಜೆ 6 ಗಂಟೆ 10 ನಿಮಿಷದ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಹಾಸನದಲ್ಲಿ ಭೂಕಂಪನದ ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲಾಗಿದೆ.

ಸಾಲಗಾಮೆ ಹೋಬಳಿಯ, ರಾಯಪುರದ ಬಳಿ 2.3 ರಷ್ಟು ಕಂಪನ ದಾಖಲಾಗಿದ್ದು, ಈ ಕಂಪನಕ್ಕೆ ಜನರು ಹೆದರುವ ಅವಶ್ಯಕತೆಯಿಲ್ಲ. ಇದರಿಂದ ಯಾವುದೇ ಸಮಸ್ಯೆಯಿಲ್ಲ ಎಂದು ಹಾಸನ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆಯಾಗಿದ್ದ ಕಾರಣ ಗ್ರಾಮಾಂತರ ಪ್ರದೇಶಗಳಲ್ಲಿ ದನಕರುಗಳನ್ನು ಕೊಟ್ಟಿಗೆಗೆ ಕಟ್ಟಲಾಗುತ್ತಿತ್ತು. ಭೂಮಿ ಲಭುವಾಗಿ ಕಂಪಿಸುತ್ತಿದ್ದಂತೆಯೇ ದನಕರು ಹಾಗೂ ಕೋಳಿ, ಪಕ್ಷಿಗಳು ವಿಚಲಿತಗೊಂಡು ಕೂಗಲಾರಂಭಿಸಿದವು. ಕ್ಷಣಮಾತ್ರಕ್ಕೆ ಏನೆಂದು ಅರ್ಥವಾಗದ ಜನರು ಕೂಡ ಭೂಮಿಯಲ್ಲಿ ಲಘುವಾದ ಕಂಪನದ ಅನುಭವವಾಯಿತೇ ವಿನಃ ಇದು ಭೂಕಂಪನ ಎನ್ನುವ ಕೊಂಚ ಅರಿವು ಕೂಡ ಇರಲಿಲ್ಲ. 

ಸೆಪ್ಟೆಂಬರ್​ 4ನೇ ತಾರೀಖಿನಂದು ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪವಾಗಿತ್ತು. ಅಂದು ರಿಕ್ಟರ್ ಮಾಪನದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿತ್ತು. ಬಳಿಕ ಸರಿಯಾಗಿ ಒಂದು ವಾರದ ಅಂತರದಲ್ಲಿ ಮತ್ತೆ ಭೂಮಿ ನಡುಗಿದ ಅನುಭವ ಆಗಿತ್ತು.

ಒಂದು ವಾರದ ಹಿಂದೆ ಭೂಕಂಪ ಆಗಿರುವ ಬಗ್ಗೆ ಹಾಗೂ ಅದರ ತೀವ್ರತೆ ಬಗ್ಗೆ ಜಿಲ್ಲಾಡಳಿತ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇದೀಗ ಮತ್ತೆ ಹಾಸನದಲ್ಲಿ ಇಂತಹ ಅನುಭವ ಆಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭಿಸಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT