ರಾಜ್ಯ

ಬೈಂದೂರು: ಮೀನುಗಾರಿಕಾ ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆ

Nagaraja AB

ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮೀನುಗಾರಿಕಾ ದೋಣಿ ಮಗುಚಿ, ಇಬ್ಬರು ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ತಾಲೂಕಿನ ಉಪ್ಪುಂದ ಕರಾವಳಿಯಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ದೋಣಿಯು ಮಗುಚಿದ ಪರಿಣಾ ಅವಘಡ ಜರುಗಿದೆ ಎನ್ನಲಾಗಿದೆ.

ನಾಪತ್ತೆಯಾದ ಮೀನುಗಾರರನ್ನು ಶರಣ್ (25) ಮತ್ತು ಅಣ್ಣಪ್ಪ (30) ಎಂದು ಗುರುತಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ನಾಪತ್ತೆಯಾದ ಮೀನುಗಾರರಿಗಾಗಿ ಶೋಧ ನಡೆಯುತ್ತಿದೆ. ಬೈಂದೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

SCROLL FOR NEXT