ಸಂಗ್ರಹ ಚಿತ್ರ 
ರಾಜ್ಯ

ಭಟ್ಕಳ: ಸಮುದ್ರ ಕಿನಾರೆಯಲ್ಲಿ ತಾಯಿ, ಮಗನ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕಾರವಾರ: ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 

ಘಟನಾ ಸ್ಥಳದಲ್ಲಿ ದೊರೆತ ದಾಖಲೆಯ ಪ್ರಕಾರ ಮೃತರನ್ನು ಬೆಂಗಳೂರಿನ ಜೆ.ಪಿ. ನಗರದ ನಿವಾಸಿಗಳಾದ ಆದಿತ್ಯ ಬಿ.ಎಸ್. (25) ಹಾಗೂ ಲಕ್ಷ್ಮೀ (48) ಎಂದು ಗುರ್ತಿಸಲಾಗಿದೆ.

ಇವರು ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿರಬಹುದು ಎಂದು ಅಂದಾಜಿಸಲಾಗಿದ್ದು, ಹುಯಿಲುಮಡಿಗೆ ಹೋಗಿ 2-3 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಘಟನೆಯ ಕುರಿತಂತೆ ಮಾಹಿತಿ ಪಡೆದ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಘಟನೆ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದರು. ಮೃತದೇಹಗಳ ಜೊತೆಗೆ ಚಾಲನಾ ಪರವಾನಗಿ ಹಾಗೂ ಆಧಾರ್ ಕಾರ್ಡ್ ಗಳಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT