ಬಸವರಾಜ ಬೊಮ್ಮಾಯಿ 
ರಾಜ್ಯ

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಪ್ರಾಯೋಜಿತ: ಸಿಎಂ ಬೊಮ್ಮಾಯಿ

ದೆಹಲಿಯ ಗಡಿಯಲ್ಲಿ ಕಳೆದ 7-8 ತಿಂಗಳಿಂದ ನಡೆಯುತ್ತಿರುವ ರೈತರ ಹೋರಾಟ ಪ್ರಾಯೋಜಿತ ಹೋರಾಟ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ದೆಹಲಿಯ ಗಡಿಯಲ್ಲಿ ಕಳೆದ 7-8 ತಿಂಗಳಿಂದ ನಡೆಯುತ್ತಿರುವ ರೈತರ ಹೋರಾಟ ಪ್ರಾಯೋಜಿತ ಹೋರಾಟ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ ನಿಯಮ 69ರ ಅಡಿ ಬೆಲೆ ಏರಿಕೆ ಕುರಿತಂತೆ ನಡೆದ ಸಾರ್ವಜನಿಕ ಮಹತ್ವದ ಚರ್ಚೆಗೆ ಉತ್ತರಿಸಿದ ಅವರು, ಹರಿಯಾಣ, ಪಂಜಾಬ್ ನ ಧನದಾಹಿ ದಲ್ಲಾಳಿಗಳು ಹಾಗೂ ಎಂಎಸ್ ಪಿ ಏಜೆಂಟರು ಇದರ ಹಿಂದಿನ ರೂವಾರಿಗಳು ಎಂದು ಆರೋಪಿಸಿದರು.

ಆಗ ಕಾಂಗ್ರೆಸ್ ನ ರಮೇಶ್ ಕುಮಾರ್, ಮಧ್ಯಪ್ರವೇಶಿಸಿ ಮುಖ್ಯಮಂತ್ರಿ ಹೇಳಿಕೆಗೆ ನಾನು ವಿರೋಧ ವ್ಯಕ್ತಪಡಿಸುವುದಿಲ್ಲ. ಪ್ರಾಯೋಜಕತ್ವದ ಹಿಂದಿನ ಶಕ್ತಿ ಯಾರು? ಯಾರ ಚಿತಾವಣೆ ಮೇರೆಗೆ ಪ್ರಾಯೋಜಕತ್ವ ಮಾಡಲಾಗಿದೆ. ಇದರಲ್ಲಿ ವಿದೇಶಿ ಕೈವಾಡವಿದೆಯೇ ಅಥವಾ ಸ್ವದೇಶಿ ಕೈವಾಡವೇ? ಎಂಬುದನ್ನು ಬಹಿರಂಗಪಡಿಸಬೇಕು ಎಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಕೆಲಕಾಲ ಪರಸ್ಪರ ಆರೋಪ-ಪ್ರತ್ಯಾರೋಪದ ಮೂಲಕ ಮಾತಿನ ಚಕಮಕಿ ನಡೆಯಿತು.

ಉತ್ತರ ಮುಂದುವರಿಸಿದ ಮುಖ್ಯಮಂತ್ರಿಗಳು, ಯುಪಿಎ ಕಾಲದಲ್ಲಿ ಒಂದು ದಿನಕ್ಕೆ 12 ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತಿತ್ತು. ಎನ್ ಡಿ ಎ ಕಾಲದಲ್ಲಿ ಪ್ರತಿ ದಿನ 34 ಕಿ.ಮಿ.ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಭತ್ತ,ಗೋಧಿ, ರಾಗಿ, ಜೋಳ, ದ್ವಿದಳ ಧಾನ್ಯಗಳ ಬೆಂಬಲ ಬೆಲೆಯನ್ನು ಮೂರು ಪಟ್ಟು ಹೆಚ್ಚು ಮಾಡಿ ದೊಡ್ಡ ಮಟ್ಟದಲ್ಲಿ ರೈತರ ನೆರವಿಗೆ ಮೋದಿ ಸರ್ಕಾರ ಧಾವಿಸಿದೆ. ಹೀಗಾಗಿ ಕೋವಿಡ್ ಸನ್ನಿವೇಶದಲ್ಲಿ ಜನಸಾಮಾನ್ಯರಿಗೆ ರೈತಾಪಿಗಳಿಗೆ ಹೆಚ್ಚು ತೊಂದರೆಯಾಗದಂತೆ ಹಸಿವಿನಿಂದ ಯಾರೋಬ್ಬರು ಸಾಯದಂತೆ ನೋಡಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅತಿದೊಡ್ಡ ಸಾಧನೆ ಎಂದು ಕೇಂದ್ರ ಸರ್ಕಾರದ ಕ್ರಮಗಳನ್ನು ಬೊಮ್ಮಾಯಿ ಬಲವಾಗಿ ಸರ್ಮರ್ಥಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT