ಬಸವರಾಜ ಬೊಮ್ಮಾಯಿ 
ರಾಜ್ಯ

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಪ್ರಾಯೋಜಿತ: ಸಿಎಂ ಬೊಮ್ಮಾಯಿ

ದೆಹಲಿಯ ಗಡಿಯಲ್ಲಿ ಕಳೆದ 7-8 ತಿಂಗಳಿಂದ ನಡೆಯುತ್ತಿರುವ ರೈತರ ಹೋರಾಟ ಪ್ರಾಯೋಜಿತ ಹೋರಾಟ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ದೆಹಲಿಯ ಗಡಿಯಲ್ಲಿ ಕಳೆದ 7-8 ತಿಂಗಳಿಂದ ನಡೆಯುತ್ತಿರುವ ರೈತರ ಹೋರಾಟ ಪ್ರಾಯೋಜಿತ ಹೋರಾಟ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ ನಿಯಮ 69ರ ಅಡಿ ಬೆಲೆ ಏರಿಕೆ ಕುರಿತಂತೆ ನಡೆದ ಸಾರ್ವಜನಿಕ ಮಹತ್ವದ ಚರ್ಚೆಗೆ ಉತ್ತರಿಸಿದ ಅವರು, ಹರಿಯಾಣ, ಪಂಜಾಬ್ ನ ಧನದಾಹಿ ದಲ್ಲಾಳಿಗಳು ಹಾಗೂ ಎಂಎಸ್ ಪಿ ಏಜೆಂಟರು ಇದರ ಹಿಂದಿನ ರೂವಾರಿಗಳು ಎಂದು ಆರೋಪಿಸಿದರು.

ಆಗ ಕಾಂಗ್ರೆಸ್ ನ ರಮೇಶ್ ಕುಮಾರ್, ಮಧ್ಯಪ್ರವೇಶಿಸಿ ಮುಖ್ಯಮಂತ್ರಿ ಹೇಳಿಕೆಗೆ ನಾನು ವಿರೋಧ ವ್ಯಕ್ತಪಡಿಸುವುದಿಲ್ಲ. ಪ್ರಾಯೋಜಕತ್ವದ ಹಿಂದಿನ ಶಕ್ತಿ ಯಾರು? ಯಾರ ಚಿತಾವಣೆ ಮೇರೆಗೆ ಪ್ರಾಯೋಜಕತ್ವ ಮಾಡಲಾಗಿದೆ. ಇದರಲ್ಲಿ ವಿದೇಶಿ ಕೈವಾಡವಿದೆಯೇ ಅಥವಾ ಸ್ವದೇಶಿ ಕೈವಾಡವೇ? ಎಂಬುದನ್ನು ಬಹಿರಂಗಪಡಿಸಬೇಕು ಎಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಕೆಲಕಾಲ ಪರಸ್ಪರ ಆರೋಪ-ಪ್ರತ್ಯಾರೋಪದ ಮೂಲಕ ಮಾತಿನ ಚಕಮಕಿ ನಡೆಯಿತು.

ಉತ್ತರ ಮುಂದುವರಿಸಿದ ಮುಖ್ಯಮಂತ್ರಿಗಳು, ಯುಪಿಎ ಕಾಲದಲ್ಲಿ ಒಂದು ದಿನಕ್ಕೆ 12 ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತಿತ್ತು. ಎನ್ ಡಿ ಎ ಕಾಲದಲ್ಲಿ ಪ್ರತಿ ದಿನ 34 ಕಿ.ಮಿ.ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಭತ್ತ,ಗೋಧಿ, ರಾಗಿ, ಜೋಳ, ದ್ವಿದಳ ಧಾನ್ಯಗಳ ಬೆಂಬಲ ಬೆಲೆಯನ್ನು ಮೂರು ಪಟ್ಟು ಹೆಚ್ಚು ಮಾಡಿ ದೊಡ್ಡ ಮಟ್ಟದಲ್ಲಿ ರೈತರ ನೆರವಿಗೆ ಮೋದಿ ಸರ್ಕಾರ ಧಾವಿಸಿದೆ. ಹೀಗಾಗಿ ಕೋವಿಡ್ ಸನ್ನಿವೇಶದಲ್ಲಿ ಜನಸಾಮಾನ್ಯರಿಗೆ ರೈತಾಪಿಗಳಿಗೆ ಹೆಚ್ಚು ತೊಂದರೆಯಾಗದಂತೆ ಹಸಿವಿನಿಂದ ಯಾರೋಬ್ಬರು ಸಾಯದಂತೆ ನೋಡಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅತಿದೊಡ್ಡ ಸಾಧನೆ ಎಂದು ಕೇಂದ್ರ ಸರ್ಕಾರದ ಕ್ರಮಗಳನ್ನು ಬೊಮ್ಮಾಯಿ ಬಲವಾಗಿ ಸರ್ಮರ್ಥಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT