ಸಂಗ್ರಹ ಚಿತ್ರ 
ರಾಜ್ಯ

ಮಸೀದಿ, ಚರ್ಚ್, ಮಂದಿರ ಶಬ್ದ ಮಾಲಿನ್ಯ ಪರಿಶೀಲನೆ: ಆನಂದ್ ಸಿಂಗ್

ಬೆಂಗಳೂರು ನಗರದಲ್ಲಿರುವ ನಗರ ವ್ಯಾಪ್ತಿಯಲ್ಲಿರುವ ಮಸೀದಿ,ಚರ್ಚ್,ದೇವಸ್ಥಾನಗಳಿಂದ ಆಗುತ್ತಿರುವ ಶಬ್ದ ಮಾಲಿನ್ಯದ ಕುರಿತು ಗೃಹ ಇಲಾಖೆ ಸಹಕಾರದಿಂದಿಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪರಿಸರ ಸಚಿವ ಆನಂದ್ ಸಿಂಗ್ ಭರಸವೆ ನೀಡಿದ್ದಾರೆ.

ಬೆಂಗಳೂರು: ಬೆಂಗಳೂರು ನಗರದಲ್ಲಿರುವ ನಗರ ವ್ಯಾಪ್ತಿಯಲ್ಲಿರುವ ಮಸೀದಿ,ಚರ್ಚ್,ದೇವಸ್ಥಾನಗಳಿಂದ ಆಗುತ್ತಿರುವ ಶಬ್ದ ಮಾಲಿನ್ಯದ ಕುರಿತು ಗೃಹ ಇಲಾಖೆ ಸಹಕಾರದಿಂದಿಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪರಿಸರ ಸಚಿವ ಆನಂದ್ ಸಿಂಗ್ ಭರಸವೆ ನೀಡಿದ್ದಾರೆ.

ಮೇಲ್ಮನೆಯಲ್ಲಿ ಪ್ರಶ್ನೋತ್ತರ ಕಲಾಪ ವೇಳೆ ಬಿಜೆಪಿ ಸದಸ್ಯ ವೈ.ಎ‌ ನಾರಾಯಣಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರದ ಅಡಿ ನಾವು ಇರುವ ಕಾಯ್ದೆಯ ಪ್ರಕಾರ ಇಲಾಖೆಯಿಂದ ನಿರ್ದೇಶನ ಹೊರಡಿಸಿದ್ದೇವೆ ರಾತ್ರಿ 10 ಬಳಗ್ಗೆ 06 ಗಂಟೆವರೆಗೆ ಧ್ವನಿವರ್ಧಕ ಬಳಕೆ ‌ನಿರ್ಬಂಧ ಇದೆ. ಇಲಾಖೆ ಮಲಗಿಲ್ಲ ಹಲವು ವರ್ಷದಿಂದ ಇದು ನಡೆಯುತ್ತಿದೆ, ಮಾಲಿನ್ಯ ನಿಯಮ ಉಲ್ಲಂಘನೆ ಆಗುತ್ತಿದೆ. ಮಾಲಿನ್ಯ ನಿಯನಮತ್ರಣ ಮಂಡಳಿ ಒಂದರಿಂದಲೇ ನಿಯಂತ್ರಣ ಸಾಧ್ಯವಿಲ್ಲ, ಪೊಲೀಸ್ ಇಲಾಖೆಯೂ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆಯಿಂದ ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ.ಆದರೂ ನಮ್ಮ ಇಲಾಖೆ ಕ್ರಮ ಕೈಗೊಳ್ಳಬೇಕು, ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇದ್ದಲ್ಲಿ ಕ್ರಮದ ಭರವಸೆ ನೀಡಿದರು.

ಬೆಳಗ್ಗೆ 4-5 ಗಂಟೆಗೆ ಆಜಾನ್ ಕೂಗುತ್ತಾರೆ ಅದನ್ನಿ ನಿರ್ಬಂಧಿಸಿದ್ದೀರಾ? ಮಸೀದಿ, ಮಂದಿರ ಲೌಡ್ ಸ್ಪೀಕರ್ ಗಳಲ್ಲಿ ಅನುಮತಿ ಪಡೆದಿದ್ದೀರಾ ಎಂದು ಬಿಜೆಪಿ ಸದಸ್ಯ ನಾರಾಯಣಸ್ವಾಮಿ ಪ್ರಶ್ನಿಸಿದರು. ಪರವಾನಗಿ ನಮ್ಮ ವ್ಯಾಪ್ತಿ ಬರಲ್ಲ, ಅದನ್ನು ಪೊಲೀಸ್ ಇಲಾಖೆ ನೋಡಬೇಕು, ಶಬ್ದ ಬಳಕೆ ವ್ಯಾಪ್ತಿ ಮಾತ್ರ ನಮ್ಮದಾಗಲಿದೆ, ಗೃಹ ಇಲಾಖೆಗೆ ಪರಿಶೀಲಿಸಿ ನೋಡಬೇಕು, ಎರಡೂ ಇಲಾಖೆ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಪ್ರವಾಸೋದ್ಯಮಕ್ಕೆ ಬಂಡವಾಳ ಆಕರ್ಷಣೆ
ಮತ್ತೊಂದು ಕಾರ್ಯಕ್ರಮದಲ್ಲಿ ಬಳ್ಳಾರಿಯಲ್ಲಿ ಮಾತನಾಡಿದ ಅವರು, ವಿಷನ್‌ ಕರ್ನಾಟಕ ಯೋಜನೆಯಡಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡುವ ಚಿಂತನೆ ಸರ್ಕಾರ ಹೊಂದಿದ್ದು, ಈ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಬಂಡವಾಳ ಆಕರ್ಷಿಸಲಾಗುವುದು ಎಂದು ಹೇಳಿದರು.  ಕೆಎಸ್‌ಟಿಡಿಯಡಿ ಬರುವ ಹೋಟೆಲ್‌ಗಳನ್ನು ಖಾಸಗಿಯವರಿಗೆ 15ರಿಂದ 30 ವರ್ಷ ಗುತ್ತಿಗೆ ನೀಡುವ ಆಲೋಚನೆ ಹೊಂದಲಾಗಿದೆ. ಈ ಮೂಲಕ ಆರ್ಥಿಕ ಕ್ರೋಡೀಕರಣ ಮಾಡಲಾಗುವುದು. ಬರೀ ಆದಾಯದ ಹಂಚಿಕೆ ಮಾತ್ರ ಮಾಡಿಕೊಳ್ಳಲಾಗುವುದು. ಆಸ್ತಿಯೆಲ್ಲ ಕೆಎಸ್‌ಡಿಸಿ ಹೆಸರಿನಲ್ಲೇ ಇರಲಿದೆ. ಹಾಗಾಗಿ ಇದರಲ್ಲಿ ಆತಂಕಪಡುವುದು ಏನಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದಕ್ಕಾಗಿ ಈ ಕಾರ್ಯ ಮಾಡಲಾಗುತ್ತಿದೆ. ಸರ್ಕಾರ ಈ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಕೂಡ ನಡೆಸಲಿದೆ ಎಂದೂ ಆನಂದ್ ಸಿಂಗ್ ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

Gold Rate: ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೇ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ, ಎಷ್ಟು ಗೊತ್ತಾ?

Video: ಯಶವಂತಪುರ ನಿಲ್ದಾಣದಲ್ಲಿ ಹೈಡ್ರಾಮಾ: RPF ಸಿಬ್ಬಂದಿ ಮೇಲೆ ಪುಂಡರ ಹಲ್ಲೆ, ರೈಲು ವಿಳಂಬ! ಆಗಿದ್ದೇನು?

ನವೆಂಬರ್‌ನಲ್ಲಿ ನಿರುದ್ಯೋಗ ದರ ಶೇ. 4.7 ಕ್ಕೆ ಇಳಿಕೆ, ಉದ್ಯೋಗ ಮಾರುಕಟ್ಟೆ ಚೇತರಿಕೆ!

SCROLL FOR NEXT