ಡಾ ಕೆ ಸುಧಾಕರ್ 
ರಾಜ್ಯ

ಚಿತ್ರೋದ್ಯಮಕ್ಕೆ ಗುಡ್ ನ್ಯೂಸ್? ಥಿಯೇಟರ್ ಗಳಲ್ಲಿ ಶೇ.100 ಆಸನ ಭರ್ತಿ ಕುರಿತು 2-3 ದಿನದಲ್ಲಿ ತೀರ್ಮಾನ- ಡಾ. ಕೆ.ಸುಧಾಕರ್

ಚಿತ್ರಮಂದಿರಗಳಲ್ಲಿ ಶೇಕಡಾ 100ರಷ್ಟು ಆಸನ ಭರ್ತಿ ವಿಚಾರವಾಗಿ ಇನ್ನೆರಡು ಮೂರು ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇಕಡಾ 100ರಷ್ಟು ಆಸನ ಭರ್ತಿ ವಿಚಾರವಾಗಿ ಇನ್ನೆರಡು ಮೂರು ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಚಿತ್ರ ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರೋಕ್ಷವಾಗಿ ದಸರಾ ಹಬ್ಬಕ್ಕೆ ಮುನ್ನ ಥಿಯೇಟರ್ ಗಳಲ್ಲಿ ಸಂಪೂರ್ಣ ಸೀಟು ಭರ್ತಿಗೆ ಸರ್ಕಾರ ಅನುಮತಿ ನೀಡುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದ್ದಾರೆ.

ಇಂದು ಆರೋಗ್ಯ ಸಚಿವರನ್ನು ಭೇಟಿ ಮಾಡಿದ ಚಿತ್ರ ನಿರ್ಮಾಪಕರು ಕಳೆದ ಒಂದೂವರೆ ವರ್ಷದಿಂದ ಕೋವಿಡ್-19 ಸಂಕ್ರಾಮಿಕ ಮತ್ತು ಥಿಯೇಟರ್ ಗಳು ಸಂಪೂರ್ಣವಾಗಿ ತೆರೆಯದಿರುವುದರಿಂದ ಚಿತ್ರೋದ್ಯಮ ಸಾಕಷ್ಟು ಸಂಕಷ್ಟದಲ್ಲಿದೆ. ಹೀಗಾಗಿ ಥಿಯೇಟರ್ ಸಂಪೂರ್ಣ ಭರ್ತಿಗೆ ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡರು.

ಇದಕ್ಕೆ ಸಿಎಂ ಬೊಮ್ಮಾಯಿಯವರ ಜೊತೆ ಚರ್ಚೆ ಮಾಡಿ ಇನ್ನೆರಡು ಮೂರು ದಿನಗಳಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, 2-3 ದಿನಗಳಲ್ಲಿ ಈ ಬಗ್ಗೆ ಸಭೆಯನ್ನು ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇದುವರೆಗೆ ಥಿಯೇಟರ್ ಗಳಲ್ಲಿ ಶೇಕಡಾ 50ರಷ್ಟು ಆಸನ ಭರ್ತಿಗೆ ಎರಡು ತಿಂಗಳ ಹಿಂದೆಯೇ ಅನುಮತಿ ಕೊಟ್ಟಿದ್ದೆವು. ಈಗ ಚಲನಚಿತ್ರ ನಿರ್ಮಾಪಕರು ಮತ್ತು ಪ್ರದರ್ಶಕರು ಬಂದು ಆದಷ್ಟು ಶೀಘ್ರದಲ್ಲಿ ಶೇಕಡಾ 100ರಷ್ಟು ಸೀಟು ಭರ್ತಿಗೆ ಮನವಿ ಮಾಡಿದ್ದಾರೆ. ನಾನು ಈ ಸಂಬಂಧ ಈಗಾಗಲೇ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರುಗಳು ಮತ್ತು ಸದಸ್ಯರುಗಳಿಗೆ ಪತ್ರ ಬರೆಯುವುದರ ಜೊತೆಗೆ ದೂರವಾಣಿ ಮೂಲಕ ಕೂಡ ಮಾತನಾಡಿದ್ದೇನೆ.

ಇಂದು ರಾಜ್ಯದಲ್ಲಿನ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಬೇರೆ ಬೇರೆ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ತೆಗೆದುಕೊಂಡಿರುವ ನಿಲುವುಗಳೇನು, ತಾಂತ್ರಿಕ ಸಲಹಾ ಸಮಿತಿಯ ಮಾರ್ಗಸೂಚಿ, ಅವರಿಗೆ ಸಹಕಾರ ಮತ್ತು ಮುನ್ನೆಚ್ಚರಿಕೆ ತೆಗೆದುಕೊಂಡು ನಾನು, ಮುಖ್ಯಮಂತ್ರಿಗಳು ಮತ್ತು ಹಿರಿಯ ಸಚಿವರುಗಳು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT