ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆ: ಮಾರಕ ಡೆಂಗ್ಯೂಗೆ 14 ವರ್ಷದ ವಿದ್ಯಾರ್ಥಿನಿ ಸಾವು

ಕೊರೊನಾ ಸೋಂಕಿನ ನಡುವೆಯೇ ಕರ್ನಾಟಕದಲ್ಲಿ ಮಾರಕ ಡೆಂಗ್ಯೂ ಆರ್ಭಟ ಕೂಡ ಮುಂದುವರೆದಿದ್ದು, ದಾವಣಗೆರೆಯಲ್ಲಿ 14 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.

ದಾವಣಗೆರೆ: ಕೊರೊನಾ ಸೋಂಕಿನ ನಡುವೆಯೇ ಕರ್ನಾಟಕದಲ್ಲಿ ಮಾರಕ ಡೆಂಗ್ಯೂ ಆರ್ಭಟ ಕೂಡ ಮುಂದುವರೆದಿದ್ದು, ದಾವಣಗೆರೆಯಲ್ಲಿ 14 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಡೆಂಗ್ಯೂ, ಮಕ್ಕಳಲ್ಲಿ ಶೀತ, ಜ್ವರ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇನ್ನು ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಬೇಬಿ ಸುಮಯ ಕೌಸರ್ ಎಂಬಾಕೆ ಡೆಂಗ್ಯೂಗೆ ಬಲಿಯಾಗಿದ್ದಾರೆ. 

ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಆ ಮೂಲಕ ಈ ವರ್ಷ ಡೆಂಗ್ಯೂಗೆ ತುತ್ತಾಗಿ ಸಾವನ್ನಪ್ಪಿದ ಮೊದಲ ವಿದ್ಯಾರ್ಥಿನಿ ಈಕೆ.

ಇನ್ನು ಜ್ವರ, ಶೀತ, ಕೆಮ್ಮು ಸೇರಿದಂತೆ ಬೇರೆ ಬೇರೆ ರೀತಿಯಲ್ಲಿ ಬಳಲುತ್ತಿರುವ ಮಕ್ಕಳನ್ನು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್. ಆರ್. ಬೀಳಗಿ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ವಾತಾವರಣ ಬದಲಾಗುತ್ತದೆ. ಸಾಮಾನ್ಯವಾಗಿ ವೈರಲ್ ಜ್ವರ ಹಾಗೂ ಡೆಂಗ್ಯೂ ಜ್ವರ ಹೆಚ್ಚಾಗಿ ಹರಡುತ್ತಿದ್ದು, ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗಳಲ್ಲಿ ಮಕ್ಕಳು ಹೆಚ್ಚಾಗಿ ದಾಖಲಾಗುತ್ತಿದ್ದಾರೆ. ವೈದ್ಯರು ಹಾಗೂ ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿರುವ ಆಕ್ಸಿಜನ್ ಘಟಕ, ಜನರೇಟರ್, ಎಂಆರ್ಐ, ಪಿಐಸಿಯು., ಮಕ್ಕಳ ವಾರ್ಡ್, ಮಕ್ಕಳ ತೀವ್ರ ನಿಗಾ ಚಿಕಿತ್ಸಾ ಘಟಕ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ವಾತಾವರಣ ಏರುಪೇರು ಆಗುವುದರಿಂದ ವೈರಲ್ ಫೀವರ್ ಮಕ್ಕಳಲ್ಲಿ ಬರುವುದು ಸಾಮಾನ್ಯ ಎಂದು ಅಭಿಪ್ರಾಯಪಟ್ಟರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT