ವಿಧಾನಪರಿಷತ್ (ಸಂಗ್ರಹ ಚಿತ್ರ) 
ರಾಜ್ಯ

ಚಾಣಕ್ಯ ವಿವಿ ಮಸೂದೆ: ಚರ್ಚೆಗೆ ಆಗ್ರಹಿಸಿ ಗದ್ದಲ, ಕೊನೆಗೂ ಕಾಯ್ದೆಗೆ ಅಂಗೀಕಾರ

ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡಿರುವ ಸೌಹಾರ್ದ ಸಹಕಾರ ಸಂಸ್ಥೆಗಳ ತಿದ್ದುಪಡಿ ಕಾಯ್ದೆಗೆ ವಿಧಾನಪರಿಷತ್ ನಲ್ಲಿ ಅಂಗೀಕಾರಗೊಂಡಿದೆ.

ಬೆಂಗಳೂರು: ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡಿರುವ ಸೌಹಾರ್ದ ಸಹಕಾರ ಸಂಸ್ಥೆಗಳ ತಿದ್ದುಪಡಿ ಕಾಯ್ದೆಗೆ ವಿಧಾನಪರಿಷತ್ ನಲ್ಲಿ ಅಂಗೀಕಾರಗೊಂಡಿದೆ.

ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಮಂಡಿಸಿದ ಮಸೂದೆಯನ್ನು ಮಂಗಳವಾರ ಪರ್ಯಾಲೋಚನೆಯಾದ ನಂತರ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. 

ಏತನ್ಮಧ್ಯೆ ಈಗಾಗಲೇ ವಿಧಾನಸಭೆಯಲ್ಲಿ ಅನುಮೋದನೆಯಾಗಿರುವ ಚಾಣಕ್ಯ ವಿಶ್ವವಿದ್ಯಾಲಯ ವಿಧೇಯಕವನ್ನು ಸಚಿವ ಅಶ್ವತ್ಥನಾರಾಯಣ್ ಮಂಡಿಸುತ್ತಿದ್ದಂತೆ ಚರ್ಚೆಯಿಲ್ಲದೆಯೇ ಅಂಗೀಕಾರ ಸಾಧ್ಯವಿಲ್ಲವೆಂದು ಪ್ರತಿಪಕ್ಷ ಸದಸ್ಯ ಮರಿತಿಬ್ಬೇಗೌಡ ಮತ್ತಿತರರು ವಿರೋಧಿಸಿದರು. ಒಂದು ಹಂತದಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಸದಸ್ಯ ಮರಿತಿಬ್ಬೇಗೌಡ ಸದನದ ಬಾವಿಗಿಳಿದಾಗ ಸಭಾಪತಿಯವರು ಕುಪಿತರಾದರು. ಈ ವೇಳೆ ಮಾತಿನ ಚಕಮಕಿ, ಕೂಗಾಟ, ಗದ್ದಲ ಕೇಳಿಬಂತು.

ತರಾತುರಿಯಲ್ಲಿ ಖಾಸಗಿ ವಿವಿ ಮಂಡನೆ ಕೈಗೆತ್ತಿಕೊಳ್ಳುವುದೇಕೆ? ಅಜೆಂಡಾದಂತೆ ಕಲಾಪಗಳನ್ನು ನಡೆಸದೆ ಮನಬಂದಂತೆ ನಡೆಸುವುದೇಕೆ ಎಂದು ಎಸ್ ಆರ್ ಪಾಟೀಲ್ ಪ್ರಶ್ನಿಸಿದರು. ಈ ವೇಳೆ ಮಾತನಾಡಿದ ಸಭಾಪತಿಗಳು, 'ಚರ್ಚೆಯ ನಂತರವಷ್ಟೇ ಚಾಣಕ್ಯ ವಿವಿ ಅಂಗೀಕಾರವಾಗಲಿದೆ' ಎಂದು ಸಭಾಪತಿಯವರು ಸಮ್ಮತಿಸಿದ ಮೇಲೆ ಮೇಲ್ಮನೆ ಕೊಂಚ ಶಾಂತವಾಯಿತು.

ಸಹಕಾರಿ ಕ್ಷೇತ್ರವೂ ಹಾದಿತಪ್ಪಿದೆ: ಮರಿತಿಬ್ಬೇಗೌಡ
ಇದಕ್ಕೂ ಮುನ್ನ, ಸಹಕಾರಿ ಕ್ಷೇತ್ರವೂ ಇತ್ತೀಚೆಗೆ ಹಾದಿತಪ್ಪಿದೆ. ಇಲ್ಲಿನ ಚುನಾವಣೆಗಳಲ್ಲಿ ಗೆಲ್ಲುವುದಕ್ಕೂ ಹಣ ಖರ್ಚು ಮಾಡಬೇಕಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ.

ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಮಂಡಿಸಿದ ಮಸೂದೆಗೆ ಸ್ಪಷ್ಟನೆ ಕೋರಿ, ರೈತ ಸಮುದಾಯಕ್ಕೆ ಒಳಿತು ಮಾಡುವ ಸಲುವಾಗಿ ನ್ಯೂನತೆಗಳನ್ನು ಸರಿಪಡಿಸಲಾಗಿದೆ. ಸದಸ್ಯತ್ವ ಉಳಿಯಬೇಕಿದ್ದಲ್ಲಿ 3 ವರ್ಷ ಸಂಘದಲ್ಲಿ ಕಡ್ಡಾಯವಾಗಿ ವ್ಯವಹರಿಸಬೇಕು ಎಂಬುದನ್ನು 2 ವರ್ಷಕ್ಕೆ ಇಳಿಸಲಾಗಿದೆ. ತಿದ್ದುಪಡಿ ಮಸೂದೆ ಸಹಕಾರ ಸಂಘಗಳ ಕತ್ತು ಹಿಚುಕದೆ, ರೈತರಿಗೆ ಸಹಕರಿಸುವ ಉದ್ದೇಶ ಹೊಂದಲಿ ಎಂದರು.

ಯು ಬಿ ವೆಂಕಟೇಶ್, ಎಸ್ ಆರ್ ಪಾಟೀಲ್, ಬೋಜೇಗೌಡ, ಬಸವರಾಜ್, ಅಪ್ಪಾಜಿಗೌಡ ಮೊದಲಾದ ಸದಸ್ಯರು ತಿದ್ದುಪಡಿ ಮೇಲಿನ ಪರ್ಯಾಲೋಚನೆ ಸಂದರ್ಭದಲ್ಲಿ ಸರ್ಕಾರಕ್ಕೆ ಸಲಹೆ ನೀಡಿದರು. ಚರ್ಚೆಯ ನಂತರ ಧ್ವನಿಮತದ ಮೂಲಕ ತಿದ್ದುಪಡಿ ಮಸೂದೆ ಅಂಗೀಕಾರವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video-ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

Switzerlandನಲ್ಲಿ ಗೋವಾ ಪಬ್ ರೀತಿ ದುರಂತ: ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಮಂದಿ ದುರ್ಮರಣ, 115 ಮಂದಿಗೆ ಗಾಯ

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ.ಹೆಚ್ಚಳ: ಸಾಮಾನ್ಯ ಜನರಿಗೆ ನೇರ ಹೊಡೆತ; ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ, ಫೈರಿಂಗ್; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್‌; ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ, ಸಿದ್ಧತೆ ಆರಂಭ: CM ಸಿದ್ದರಾಮಯ್ಯ

SCROLL FOR NEXT