ರಾಜ್ಯ

ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ಆಗುವಂತೆ ಮಾಡುತ್ತೇವೆ: ಸಿಎಂ ಬೊಮ್ಮಾಯಿ

Srinivasamurthy VN

ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಮರಣ ದಂಡನೆ ಆಗುವಂತೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಮೈಸೂರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸದನಕ್ಕೆ ಮಾಹಿತಿ ನೀಡಿದರು.

ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿ ನಿಯಮ 69 ಅಡಿಯಲ್ಲಿ ನಡೆಯುತ್ತಿದ್ದ ಚರ್ಚೆಯಲ್ಲಿ ಮಾತನಾಡುತ್ತಾ ಸಿದ್ದರಾಮಯ್ಯ, ಅವರು ಪ್ರಕರಣವನ್ನು ಸರ್ಕಾರ ನಿರ್ವಹಣೆ ಮಾಡಿದ ರೀತಿ ಸರಿ ಇಲ್ಲ. ಈವರೆಗೆ ಸಂತ್ರಸ್ತೆಯ ಹೇಳಿಕೆ ಪಡೆದುಕೊಂಡಿಲ್ಲ ಎಂದು ಆರೋಪಿಸಿದರು.‌

ಇದಕ್ಕೆ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಮೈಸೂರು ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಯುವತಿ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾರೆ.‌ ಯುವತಿಯ ಹೇಳಿಕೆ ಪಡೆದುಕೊಳ್ಳುವಲ್ಲಿ ಪೊಲೀಸರು ಯಶಸ್ವಿ ಆಗಿದ್ದಾರೆ.‌ ಮೈಸೂರು ಅತ್ಯಾಚಾರ ಪ್ರಕರಣದ ತನಿಖೆಯನ್ನು ಬಿಗಿಯಾಗಿ ಮಾಡುತ್ತೇವೆ. ಸರಿಯಾದ ರೀತಿಯಲ್ಲಿ ಚಾರ್ಜ್‌ಶೀಟ್ ಹಾಕುತ್ತೇವೆ. ಈ ಪ್ರಕರಣದ ತನಿಖೆಯ ದೃಷ್ಟಿಯಿಂದ ವಿಶೇಷ ಅಭಿಯೋಜಕರ ನೇಮಕ ಮಾಡುತ್ತೇವೆ. ಅಷ್ಟೇ ಅಲ್ಲದೆ ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ ಆಗುವಂತೆ ಮಾಡುತ್ತೇವೆ ಎಂದು ಭರವಸೆ ಕೊಟ್ಟರು.‌

SCROLL FOR NEXT