ಸಿಎಂ ಬೊಮ್ಮಾಯಿ 
ರಾಜ್ಯ

ಯೋಜನೆಗಳ ವೇಗಗೊಳಿಸಲು ಟಿಡಿಆರ್ ಸರಳೀಕರಣಕ್ಕೆ ವಿಧೇಯಕ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಯೋಜನೆಗಳ ವೇಗಗೊಳಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ ವರ್ಗಾಯಿಸಬಹುದಾದ ಅಭಿವೃದ್ಧಿ (ಟಿಡಿಆರ್) ಸರಳೀಕರಣಗೊಳಿಸುವ ಕುರಿತು ಪ್ರತ್ಯೇಕ ವಿಧೇಯಕವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಯೋಜನೆಗಳ ವೇಗಗೊಳಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ ವರ್ಗಾಯಿಸಬಹುದಾದ ಅಭಿವೃದ್ಧಿ (ಟಿಡಿಆರ್) ಸರಳೀಕರಣಗೊಳಿಸುವ ಕುರಿತು ಪ್ರತ್ಯೇಕ ವಿಧೇಯಕವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ಬನ್ನೇರುಘಟ್ಟರಸ್ತೆ, ಬೇಗೂರು ರಸ್ತೆ-ಸರ್ಜಾಪುರ ರಸ್ತೆ ಅಗಲೀಕರಣ ಕಾಮಗಾರಿ ವಿಳಂಬದಿಂದ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ. ಬನ್ನೇರುಘಟ್ಟ ರಸ್ತೆಯನ್ನು 120 ಅಡಿಗೆ ಅಗಲೀಕರಣ ಮಾಡುವ ಸಂಬಂಧ ಭೂಸ್ವಾಧೀನವಾದ ಜಾಗಕ್ಕೆ ಮೆಟ್ರೋ ಸಂಸ್ಥೆಯು ಪ್ರತಿ ಚದರಡಿಗೆ ರೂ.17 ಸಾವಿರ ಪರಿಹಾರ ನೀಡಿದೆ. ಆದರೆ, ಆದರೆ, ಬಿಬಿಎಂಪಿಯಿಂದ ಭೂಸ್ವಾಧೀನ ಆಗಬೇಕಿರುವ ಜಾಗಕ್ಕೆ ಬಿಬಿಎಂಪಿಯವರು ಟಿಡಿಆರ್ ನೀಡಲು ಮುಂದಾಗಿದ್ದಾರೆ. ಈ ಟಿಡಿಆರ್'ಗೆ ಬೆಲೆ ಇಲ್ಲದಿರುವುದರಿಂದ ಮಾಲೀಕರು ಪಡೆಯುತ್ತಿಲ್ಲ. ಟಿಡಿಆರ್ ಬ್ಯಾಂಕ್ ಮಾಡಿದರೆ ಇಂತಹ ಸಮಸ್ಯೆ ಉದ್ಭವವಾಗುವುದಿಲ್ಲ. ಭೂ ಸ್ವಾಧೀನ ಮತ್ತು ಯೋಜನೆ ಅಧಿಕಾರಿಗಳು ಬಿಬಿಎಂಪಿ ಮತ್ತು ಬಿಡಿಎಯಿಂದ ಒಪ್ಪಿಗೆ ಪಡೆಯಬೇಕಿದ್ದು. ಪ್ರಸ್ತುತ ಇರುವ ಟಿಡಿಆರ್ ಪ್ರಕ್ರಿಯೆ ಜಟಿಲವಾಗಿದೆ. ಹೀಗಾಗಿ ಮೆಟ್ರೋ ವತಿಯಿಂದಲೇ ಈ ಕಾಮಗಾರಿ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದರು. 

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಬಿಬಿಎಂಪಿ ಖಜಾನೆಯಿಂದ ನೀಡಬೇಕಾದರೆ ರೂ.4,475 ಕೋಟಿ ಹೊರೆಯಾಗುತ್ತದೆ. ಹೀಗಾಗಿ ಟಿಡಿಆರ್ ಮುಂದೆ ಬರುತ್ತಿಲ್ಲ. ಏಕೆಂದರೆ ಟಿಡಿಆರ್ ನೀಡುವ ಪದ್ಧತಿಯಲ್ಲಿ ಗೊಂದಲಗಳಿವೆ. ಯೋಜನಾ ಪ್ರಾಧಿಕಾರ ಹಾಗೂ ಕಾಮಗಾರಿ ಅನುಷ್ಠಾನ ಏಜೆನ್ಸಿಗಳು ಇಬ್ಬರೂ ಟಿಡಿಆರ್'ಗೆ ಅನುಮೋದನೆ ನೀಡಬೇಕು. ಇದರಿಂದ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುತ್ತದೆ. ಜೊತೆಗೆ ಟಿಡಿಆರ್ ಬಳಕೆ ಕುರಿತು ಸಹ ಗೊಂದಲಗಳಿವೆ. ಹೀಗಾಗಿ ಟಿಡಿಆರ್ ಸರಳೀಕರಣ ಮಾಡುವ ಮೂಲಕ ಹೆಚ್ಚು ಬೆಲೆ ಬರುವಂತೆ ಮಾಡಲು ವಿಧೇಯಕ ಮಂಡಿಸಲಾಗುತ್ತದೆ ಎಂದು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT