ಸಾಂಕೇತಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಅರ್ಚಕನ ಮೇಲೆ ಹಲ್ಲೆ: ನಗ-ನಾಣ್ಯ ದೋಚಿ ದುಷ್ಕರ್ಮಿಗಳು ಪರಾರಿ 

ಮಾಜಿ ಸಚಿವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ನಗ-ನಾಣ್ಯ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮೂರು ದಿನಗಳ ಹಿಂದೆ ನಡೆದಿದೆ.

ಬೆಂಗಳೂರು: ಮಾಜಿ ಸಚಿವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ನಗ-ನಾಣ್ಯ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮೂರು ದಿನಗಳ ಹಿಂದೆ ನಡೆದಿದೆ.

ಸೆಪ್ಟೆಂಬರ್ 20ರಂದು ನಡೆದ ಪ್ರಕರಣ ಇಂದು ಬೆಳಕಿಗೆ ಬಂದಿದ್ದು ಮಾಜಿ ಸಚಿವ ಆರ್ ಶಂಕರ್ ಅವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮಾಡಿ ಮುಗಿಸಿ ಹಿಂತಿರುಗುತ್ತಿದ್ದ ಅರ್ಚಕ ಮಣಿಕಂಠ ಶರ್ಮ ಎಂಬುವವರ ಮೇಲೆ ಹೆಣ್ಣೂರು ಅಂಡರ್ ಪಾಸ್ ಬಳಿ ದುಷ್ಕರ್ಮಿಗಳು ತಡೆದು ನಿಲ್ಲಿಸಿ ಹಲ್ಲೆ ಮಾಡಿದ್ದಾರೆ.ಅರ್ಚಕರು ಕಲ್ಯಾಣನಗರದಿಂದ ಬರುತ್ತಿದ್ದರು.

ಈ ವೇಳೆ ಅರ್ಚಕ ಮಣಿಕಂಠ ಶರ್ಮ ಅವರ ದೇಹದಲ್ಲಿದ್ದ ಸುಮಾರು 60 ಗ್ರಾಂ ಚಿನ್ನ ಮತ್ತು ಸುಮಾರು 20 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ.

ದರೋಡೆಕೋರರಿಂದ ತಪ್ಪಿಸಿಕೊಂಡು ಬಂದ ಅರ್ಚಕರು ಪೊಲೀಸರಿಗೆ ದೂರು ನೀಡಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT