ಸಂಗ್ರಹ ಚಿತ್ರ 
ರಾಜ್ಯ

ಸಾಲು ಸಾಲು ಹಬ್ಬ: ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್'ಟಿಸಿಯಿಂದ ಹೆಚ್ಚುವರಿ ಬಸ್

ಅಕ್ಟೋಬರ್‌ನಿಂದ ಸಾಲು ಸಾಲು ಹಬ್ಬಗಳು ಆರಂಭವಾಗುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಒಂದು ಸಾವಿರ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಿದೆ.

ಬೆಂಗಳೂರು: ಅಕ್ಟೋಬರ್‌ನಿಂದ ಸಾಲು ಸಾಲು ಹಬ್ಬಗಳು ಆರಂಭವಾಗುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಒಂದು ಸಾವಿರ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಿದೆ.

ದಸರಾ ಪ್ರಯುಕ್ತ ಅ.13ರಿಂದ 21ರ ವರೆಗೆ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಅ.29ರಿಂದ ನ.11ರ ವರೆಗೆ ಒಂದು ಸಾವಿರ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು. 

ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಸಂಚರಿಸಲಿವೆ.

ಹೊರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್‌, ತಿರುವನಂತಪುರಂ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪುಣೆ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಾಗುವುದು. ಹೆಚ್ಚುವರಿ ಬಸ್‌ಗಳ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. 

ನಿಗಮದ ಅಧಿಕೃತ ಜಾಲತಾಣ ಮತ್ತು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿರುವ ಬುಕಿಂಗ್‌ ಕೌಂಟರ್‌ಗಳಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸಬಹುದು. ಪ್ರಯಾಣಿಕರು ಈ ಹೆಚ್ಚುವರಿ ಬಸ್‌ಗಳ ಉಪಯೋಗ ಪಡೆದುಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಕೋರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ