ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವಜಾತ ಶಿಶು. 
ರಾಜ್ಯ

ವಿಜಯಪುರ ಜಿಲ್ಲಾಸ್ಪತ್ರೆಯಿಂದ ಮಾರಾಟವಾಗಿದ್ದ ಮಗು ಹುಬ್ಬಳ್ಳಿ ಕಿಮ್ಸ್‌ನಲ್ಲಿ ಪತ್ತೆ!

ವಿಜಯಪುರದಲ್ಲಿ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸುದ್ದಿಯಾಗಿದ್ದ ನವಜಾತ ಶಿಶು ಮಾರಾಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ವಿಜಯಪುರ: ವಿಜಯಪುರದಲ್ಲಿ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸುದ್ದಿಯಾಗಿದ್ದ ನವಜಾತ ಶಿಶು ಮಾರಾಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. 

ಮಾರಾಟವಾಗಿದ್ದ ಮಗು, ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದು, ಏತನ್ಮಧ್ಯೆ ಮಗು ಮಾರಾಟಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೂಲತಃ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣ ನಿವಾಸಿ, ಹಾಲಿ ವಿಜಯಪುರ ಆದರ್ಶ ನಗರ ನಿವಾಸಿ ಮಹಮ್ಮದ್ ರಫೀಕ್ ಸಲೀಂ ಸಾಬ್ ಹವಾಲ್ದಾರ್ (27) ಬಂಧಿತ ಆರೋಪಿ ಎಂದು ಎಸ್ಪಿ ಎಚ್‌. ಡಿ. ಆನಂದ್ ಕುಮಾರ್ ತಿಳಿಸಿದ್ದಾರೆ.

ಆರೋಪಿ ರಫೀಕ್'ಗೆ ಇಬ್ಬರು ಮಕ್ಕಳಿದ್ದು, 25 ವರ್ಷದ ಮಹಿಳೆಯೊಬ್ಬರು ಮದರ್ ಆ್ಯಂಡ್ ಚೈಲ್ಡ್ ಆಸ್ವತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಬಳಿಕ ಅಲ್ಲಿನ ಸ್ಟಾಫ್ ನರ್ಸ್ ಕಸ್ತೂರಿ ಎಂಬುವವರೊಂದಿಗೆ ಮಹಿಳೆ ಮಗು ಮಾರಾಟ ಕುರಿತು ಮಾತನಾಡುತ್ತಿರುವುದನ್ನು ಆರೋಪಿ ಕೇಳಿಸಿಕೊಂಡಿದ್ದಾನೆ. ಬಳಿಕ ನೇರವಾಗಿ ಮಹಿಳೆಯನ್ನೇ ಸಂಪರ್ಕಿಸಿ ರೂ.6,000 ನೀಡಿ ಮಗುವನ್ನು ನೇರವಾಗಿ ಖರೀದಿಸಿದ್ದಾನೆ. 

ಹಲವು ವರ್ಷಗಳು ಕಳೆದರು ಸಂಬಂಧಿಕರೊಬ್ಬರಿಗೆ ಮಕ್ಕಳಾಗದ ಕಾರಣ ಅವರಿಗಾಗಿ ಮಗುವನ್ನು ಖರೀದಿ ಮಾಡಿರುವುದಾಗಿ ಆರೋಪಿ ಹೇಳಿಕೊಂಡಿದ್ದಾನೆ. ಅವಧಿಪೂರ್ವ ಜನನವಾಗಿದ್ದ ಹಿನ್ನೆಲೆಯಲ್ಲಿ ಆರೋಪಿ ಮಗುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದ ಎಂದು ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ವಿಚಾರ ಬಹಿರಂಗಗೊಂಡಿದೆ.

ಆಗಸ್ಟ್ 19 ರಂದು ಘಟನೆ ನಡೆದಿದ್ದು, ನರ್ಸ್ ಸಹಾಯದೊಂದಿಗೆ ತಾಯಿಯೇ ಮಗುವನ್ನು ಮಾರಾಟ ಮಾಡಿರುವುದು ಇದೀಗ ತಿಳಿದುಬಂದಿದೆ. ಪ್ರಕರಣದಲ್ಲಿ ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಕಸ್ತೂರಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್​ ಎಲ್​ ಲಕ್ಕಮ್ಮಣವರ ಆದೇಶಿಸಿದ್ದು, ಸ್ಟಾಫ್​​ ನರ್ಸ್ ಕಸ್ತೂರಿಯ ಪತಿ ಮಂಜುನಾಥ​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT