ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವಜಾತ ಶಿಶು. 
ರಾಜ್ಯ

ವಿಜಯಪುರ ಜಿಲ್ಲಾಸ್ಪತ್ರೆಯಿಂದ ಮಾರಾಟವಾಗಿದ್ದ ಮಗು ಹುಬ್ಬಳ್ಳಿ ಕಿಮ್ಸ್‌ನಲ್ಲಿ ಪತ್ತೆ!

ವಿಜಯಪುರದಲ್ಲಿ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸುದ್ದಿಯಾಗಿದ್ದ ನವಜಾತ ಶಿಶು ಮಾರಾಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ವಿಜಯಪುರ: ವಿಜಯಪುರದಲ್ಲಿ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸುದ್ದಿಯಾಗಿದ್ದ ನವಜಾತ ಶಿಶು ಮಾರಾಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. 

ಮಾರಾಟವಾಗಿದ್ದ ಮಗು, ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದು, ಏತನ್ಮಧ್ಯೆ ಮಗು ಮಾರಾಟಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೂಲತಃ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣ ನಿವಾಸಿ, ಹಾಲಿ ವಿಜಯಪುರ ಆದರ್ಶ ನಗರ ನಿವಾಸಿ ಮಹಮ್ಮದ್ ರಫೀಕ್ ಸಲೀಂ ಸಾಬ್ ಹವಾಲ್ದಾರ್ (27) ಬಂಧಿತ ಆರೋಪಿ ಎಂದು ಎಸ್ಪಿ ಎಚ್‌. ಡಿ. ಆನಂದ್ ಕುಮಾರ್ ತಿಳಿಸಿದ್ದಾರೆ.

ಆರೋಪಿ ರಫೀಕ್'ಗೆ ಇಬ್ಬರು ಮಕ್ಕಳಿದ್ದು, 25 ವರ್ಷದ ಮಹಿಳೆಯೊಬ್ಬರು ಮದರ್ ಆ್ಯಂಡ್ ಚೈಲ್ಡ್ ಆಸ್ವತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಬಳಿಕ ಅಲ್ಲಿನ ಸ್ಟಾಫ್ ನರ್ಸ್ ಕಸ್ತೂರಿ ಎಂಬುವವರೊಂದಿಗೆ ಮಹಿಳೆ ಮಗು ಮಾರಾಟ ಕುರಿತು ಮಾತನಾಡುತ್ತಿರುವುದನ್ನು ಆರೋಪಿ ಕೇಳಿಸಿಕೊಂಡಿದ್ದಾನೆ. ಬಳಿಕ ನೇರವಾಗಿ ಮಹಿಳೆಯನ್ನೇ ಸಂಪರ್ಕಿಸಿ ರೂ.6,000 ನೀಡಿ ಮಗುವನ್ನು ನೇರವಾಗಿ ಖರೀದಿಸಿದ್ದಾನೆ. 

ಹಲವು ವರ್ಷಗಳು ಕಳೆದರು ಸಂಬಂಧಿಕರೊಬ್ಬರಿಗೆ ಮಕ್ಕಳಾಗದ ಕಾರಣ ಅವರಿಗಾಗಿ ಮಗುವನ್ನು ಖರೀದಿ ಮಾಡಿರುವುದಾಗಿ ಆರೋಪಿ ಹೇಳಿಕೊಂಡಿದ್ದಾನೆ. ಅವಧಿಪೂರ್ವ ಜನನವಾಗಿದ್ದ ಹಿನ್ನೆಲೆಯಲ್ಲಿ ಆರೋಪಿ ಮಗುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದ ಎಂದು ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ವಿಚಾರ ಬಹಿರಂಗಗೊಂಡಿದೆ.

ಆಗಸ್ಟ್ 19 ರಂದು ಘಟನೆ ನಡೆದಿದ್ದು, ನರ್ಸ್ ಸಹಾಯದೊಂದಿಗೆ ತಾಯಿಯೇ ಮಗುವನ್ನು ಮಾರಾಟ ಮಾಡಿರುವುದು ಇದೀಗ ತಿಳಿದುಬಂದಿದೆ. ಪ್ರಕರಣದಲ್ಲಿ ಜಿಲ್ಲಾಸ್ಪತ್ರೆಯ ಸ್ಟಾಫ್​​ ನರ್ಸ್ ಕಸ್ತೂರಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್​ ಎಲ್​ ಲಕ್ಕಮ್ಮಣವರ ಆದೇಶಿಸಿದ್ದು, ಸ್ಟಾಫ್​​ ನರ್ಸ್ ಕಸ್ತೂರಿಯ ಪತಿ ಮಂಜುನಾಥ​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT