ರಾಜ್ಯ

ಬಿಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ

Vishwanath S

ಬೆಂಗಳೂರು: ಲೋಕಸಭಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದ್ದು, ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಯಿತು.

ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದರು.

ಈ ವೇಳೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ಐತಿಹಾಸಿಕ ಜಂಟಿ ಅಧಿವೇಶನದಲ್ಲಿ ಇಂತಹ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ನೀಡಲಾಗುತ್ತಿದ್ದು ಮುಂದಿನ ವರ್ಷದಿಂದ ಈ ಪ್ರಕ್ರಿಯೆ ಮುಂದುವರೆಯಲಿದೆ ಎಂದರು.

ಸಂಸದೀಯ ಪಟುವಾಗಿ ಸದನಕ್ಕೆ ಮಾರ್ಗದರ್ಶನ ಮಾಡಿದವರಿಗೆ ಸಹಜವಾಗಿ ಯಾರಿಗೆ ಪ್ರಶಸ್ತಿ ಕೊಡಬೇಕು ಎನ್ನುವುದು ಗೊಂದಲ ಮೂಡಿಸಿತ್ತು. ನನ್ನ ಜೀವನದಲ್ಲಿ ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

SCROLL FOR NEXT