ಕೊಲೆಯಾದ ಭವಾನಿ ಮತ್ತು ಪುತ್ರಿ 
ರಾಜ್ಯ

ಕಲಬುರಗಿ: ಪತ್ನಿ-ಮಗಳನ್ನು ಕೊಂದು ಪಾನಿಪುರಿ ವ್ಯಾಪಾರಿ ಪೊಲೀಸರಿಗೆ ಶರಣು

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹೆಂಡತಿಯ ನಡತೆ ಶಂಕಿಸಿ ಪದೇ ಪದೇ ಜಗಳವಾಡುತ್ತಿದ್ದ ಪತಿ ತಡರಾತ್ರಿ ಪತ್ನಿ ಹಾಗೂ ಮಗಳನ್ನೇ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ವಿಶ್ವನಗರ ಬಡಾವಣೆಯಲ್ಲಿ ನಡೆದಿದೆ.

ಕಲಬುರಗಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹೆಂಡತಿಯ ನಡತೆ ಶಂಕಿಸಿ ಪದೇ ಪದೇ ಜಗಳವಾಡುತ್ತಿದ್ದ ಪತಿ ತಡರಾತ್ರಿ ಪತ್ನಿ ಹಾಗೂ ಮಗಳನ್ನೇ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ವಿಶ್ವನಗರ ಬಡಾವಣೆಯಲ್ಲಿ ನಡೆದಿದೆ.

ಕೊಲೆ ಮಾಡಿದ ಪತಿಯನ್ನು ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದ ಕಲಬುರಗಿ ನಿವಾಸಿ ದಿಗಂಬರ ಹಣಮಂತಪ್ಪ ಗಾಂಜಲಿ (47) ಎಂದು ಗುರುತಿಸಲಾಗಿದೆ. ಈತ ಬುಧವಾರ ತಡರಾತ್ರಿ ಪತ್ನಿ ಜಗದೇವಿ (35) ಹಾಗೂ ಮಗಳು ಪ್ರಿಯಾಂಕಾ (11) ಇಬ್ಬರನ್ನೂ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಕಲ್ಬುರ್ಗಿ ನಿವಾಸಿಯಾದ ಈತ ಪತ್ನಿ ಹಾಗೂ ಮಗಳ ಸಮೇತ ಈಚೆಗೆ ಸೇಡಂ ಪಟ್ಟಣಕ್ಕೆ ಬಂದು ನೆಲೆಸಿದ್ದ. ಹೊಟ್ಟೆ ಹೊರೆಯಲು ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದ.

ಆದರೆ ತನ್ನ ಪತ್ನಿಯ ನಡತೆ ಸರಿಯಾಗಿಲ್ಲ ಎಂದು ಪದೇಪದೇ ಜಗಳವಾಡಿಕೊಂಡಿದ್ದ. ಆದರೆ, ಬುಧವಾರ ಜಗಳ ವಿಕೋಪಕ್ಕೆ ತೆರಳಿದಾಗ ಕಟ್ಟಿಗೆಯಿಂದ ಪತ್ನಿಯನ್ನು ಹೊಡೆದು ಸಾಯಿಸಿದ, ನಂತರ ಮಗಳನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ವಿಷಯವನ್ನು ತನ್ನ ಸಂಬಂಧಿಕರಿಗೆ ತಿಳಿಸಿ ನಂತರ ಸೇಡಂ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಮೂಲಗಳ ಪ್ರಕಾರ, ದಿಗಂಬರ್ ರಾಮನಗರದಲ್ಲಿ ಪಾನಿಪುರಿ ಮಾರಾಟ ಮಾಡುತ್ತಿದ್ದ, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಷ್ಟ ಅನುಭವಿಸಿದ್ದ. ನಂತರ ಆತ ತನ್ನ ವ್ಯಾಪಾರವನ್ನು ಸೇಡಮ್‌ಗೆ ವರ್ಗಾಯಿಸಿದ್ದನು, ಅವನ ಕುಟುಂಬವು ಕೆಲವು ತಿಂಗಳ ಹಿಂದೆ ಪಟ್ಟಣದ ವಿಶ್ವನಗರ ಪ್ರದೇಶದಲ್ಲಿ ನೆಲೆಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT