ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಅ.1 ರಿಂದ ಚಿತ್ರಮಂದಿರ, ಅ.3 ರಿಂದ ಶಾಲಾ ಕಾಲೇಜು ಮತ್ತು ಪಬ್ ಗಳಿಗೆ ಶೇಖಡ 100ರಷ್ಟು ಹಾಜರಾತಿಗೆ ಸರ್ಕಾರ ಒಪ್ಪಿಗೆ

ಅಕ್ಟೋಬರ್ 1 ರಿಂದ ಚಿತ್ರಮಂದಿರ. ಅಕ್ಟೋಬರ್ 3 ರಿಂದ ಶಾಲಾ-ಕಾಲೇಜು ಸೇರಿ ಪಬ್ ಗಳಿಗೂ ಶೇಕಡ ನೂರರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿ ಕೆಲವು ನಿಯಮಗಳನ್ನು ಸೂಚಿಸಿದೆ.

ಬೆಂಗಳೂರು: ಅಕ್ಟೋಬರ್ 1 ರಿಂದ ಚಿತ್ರಮಂದಿರ. ಅಕ್ಟೋಬರ್ 3 ರಿಂದ ಶಾಲಾ-ಕಾಲೇಜು ಸೇರಿ ಪಬ್ ಗಳಿಗೂ ಶೇಕಡ ನೂರರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿ ಕೆಲವು ನಿಯಮಗಳನ್ನು ಸೂಚಿಸಿದೆ.

ಶೇ.1 ಕ್ಕಿಂತ ಕಡಿಮೆ ಕೋವಿಡ್ ಪ್ರಕರಣವಿರುವ ಭಾಗಗಳಲ್ಲಿ ಮಾತ್ರ ಶೇ.100 ರಷ್ಟು ಚಿತ್ರಮಂದಿರ ತುಂಬಲು ಅವಕಾಶ ಕಲ್ಪಿಸಿದ್ದು, ಶೇ.1 ಕ್ಕಿಂತ ಪ್ರಕರಣ ಹೆಚ್ಚಿರುವ ಕಡೆ ಶೇ.50 ಹಾಗೂ ಶೇ.2 ಕ್ಕಿಂತ ಕೋವಿಡ್ ಪ್ರಕರಣ ಹೆಚ್ಚಿರುವ ಭಾಗಗಳಲ್ಲಿ ಚಿತ್ರಮಂದಿರ ಬಂದ್ ಮಾಡುವುದಾಗಿಯೂ ಹಾಗೂಚಿತ್ರಮಂದಿರದಲ್ಲಿ ಚಿತ್ರ ವೀಕ್ಷಿಸುವವರು ಕೋವಿಡ್ ಮೊದಲನೇ ಲಸಿಕೆಯನ್ನಾದರೂ ಕಡ್ಡಾಯವಾಗಿ ಪಡೆದಿರಬೇಕೆಂದು ಷರತ್ತು ವಿಧಿಸಿದೆ.ಗರ್ಭಿಣಿ ಹಾಗೂ ಮಕ್ಕಳಿಗೆ ಚಿತ್ರಮಂದಿರದಲ್ಲಿ ಅವಕಾಶ ನೀಡದಿರಲು ನಿರ್ಧರಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿನ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಉನ್ನತ ಮಟ್ಟದ ತಜ್ಞರ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಕೋವಿಡ್ ಪ್ರಕರಣಗಳು ಶೇ.0.66 ಬಗ್ಗೆ ಸಂಬಂಧಿಸಿದವರಿಂದ ಸಿಎಂ ಮಾಹಿತಿ ಪಡೆದರು.ರಾತ್ರಿ ಕರ್ಫ್ಯೂವನ್ನು ರಾತ್ರಿ 1- ರಿಂದ ಬೆಳಿಗ್ಗೆ 5ರವರೆಗೆ ನಿಗದಿ ಪಡಿಸಿ, 6-12 ನೇ ತರಗತಿವರೆಗೆ ಶೇ.100 ರಷ್ಟು ಹಾಜರಾತಿಯಂತೆ ವಾರದಲ್ಲಿ 5 ದಿನ ಶಾಲಾ ಕಾಲೇಜು ನಡೆಸಲು ತೀರ್ಮಾನಿಸಲಾಯಿತು.

ದಸರಾ ಬಗ್ಗೆ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು, ಗಡಿಭಾಗಗಳಲ್ಲಿ ಹೆಚ್ಚು ನಿಗಾ, ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ ತೀವ್ರಗೊಳಿಸಲು ಜನರಲ್ಲಿ ಲಸಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಅಕ್ಟೋಬರ್ 3 ರಿಂದ ಪಬ್ ಗಳಿಗೆ ಅನುಮತಿ ನೀಡಲು ಹಾಗೂ 1-5 ಶಾಲೆಗಳನ್ನು ಸದ್ಯಕ್ಕೆ ತೆರೆಯದಿರಲು ನಿರ್ಧರಿಸುವುದಾಗಿ ಹೇಳಿದರು.

ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ, ಕಂದಾಯ ಸಚಿವ ಆರ್ ಅಶೋಕ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT