ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು 789 ಹೊಸ ಸೋಂಕು ಪ್ರಕರಣಗಳು ಪತ್ತೆ, 23 ಮಂದಿ ಸಾವು

Srinivasamurthy VN

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕದ ಅಬ್ಬರ ಕೊಂಚ ಇಳಿಕೆಯಾಗಿದ್ದು, ಇಂದೂ 750 ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಒಟ್ಟು 789 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29, 71, 833ಕ್ಕೆ ಏರಿಕೆಯಾಗಿದೆ. ಅಂತೆಯೇ ಇದೇ ಅವಧಿಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ 8 ಮಂದಿ ಸೇರಿ ಒಟ್ಟು 23 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್ ಮಹಾಮಾರಿಗೆ ಬಲಿಯಾದ ಒಟ್ಟಾರೆ ಸೋಂಕಿತರ ಸಂಖ್ಯೆ 37,706ಕ್ಕೆ ಏರಿಕೆಯಾಗಿದೆ.

ಇನ್ನು ಇಂದು 1050 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟಾರೆ ಸಂಖ್ಯೆ 29, 20, 792ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ7,443 ರಾಜ್ಯದಲ್ಲಿ 13, 306 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇಂದಿನ ಸೋಂಕು ಸಕರಾತ್ಮಕ ಪ್ರಮಾಣ ಶೇ.0.58ರಷ್ಟಿದ್ದು, ಸಾವಿನ ದರ ಶೇ.2.91ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಇಂದು 1,35,581 ಕೋವಿಡ್ ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
 

SCROLL FOR NEXT