ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ 
ರಾಜ್ಯ

ನವೆಂಬರ್ ನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ: ಸಚಿವ ಮುರುಗೇಶ್ ನಿರಾಣಿ

ರಾಜ್ಯದಲ್ಲಿ ಮಂದಿನ ವರ್ಷದ ನವೆಂಬರ್ 2ರಿಂದ 4ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಜರುಗಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ವಿಧಾನಸಭೆಗಿಂದು ತಿಳಿಸಿದರು.

ಬೆಂಗಳೂರು: ರಾಜ್ಯದಲ್ಲಿ ಮಂದಿನ ವರ್ಷದ ನವೆಂಬರ್ 2ರಿಂದ 4ವರೆಗೆ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಜರುಗಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ವಿಧಾನಸಭೆಗಿಂದು ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಸದುದ್ದೇಶದಿಂದ 2022ರ ನವೆಂಬರ್ ನಲ್ಲ್ಲಿ ಮೂರು ದಿನಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. 

ಈ ಸಮಾವೇಶದಿಂದ ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಹರಿದು ಬರವುದಲ್ಲದೆ ಹೆಚ್ಚು ಉದ್ಯೋಗ ದೊರಕಲಿದೆ ಎಂದು ಹೇಳಿದರು. ಯಾದಗಿರಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಔಷಧಿ ಕಾರ್ಖಾನೆ ತೆರೆಯಲು ತೀರ್ಮಾನಿಸಲಾಗಿದೆ. 

ಇದಕ್ಕೆ ಕೇಂದ್ರ ಸಾವಿರ ಕೋಟಿ ಅನುದಾನ ನೀಡಲಿದೆ ಎಂದು ಸಚಿವರು ಹೇಳಿದರು. ಇದಕ್ಕಾಗಿ ಮೂರು ರಾಜ್ಯಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಇದರಲ್ಲಿ ಕರ್ನಾಟಕವೂ ಸಹ ಆರ್ಥಿಕ ನೆರವು ಪಡೆಯಲಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT