ಬೆಂಗಳೂರು: ನಗರದ ಬಿಬಿಎಂಪಿ ಆಸ್ಪತ್ರೆಯ ವೈದ್ಯೆ, ಸಿಬ್ಬಂದಿ ಮೇಲೆ ಸ್ಥಳೀಯರ ಗುಂಪೊಂದು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಕೊರೊನಾ ವ್ಯಾಕ್ಸಿನ್ ವಿಚಾರವಾಗಿ ಅಸಮಾಧಾನಗೊಂಡಿದ್ದ ಸ್ಥಳೀಯರ ಗುಂಪೊಂದು ಏಕಾಏಕೇ ಆಸ್ಪತ್ರೆಗೆ ನುಗ್ಗಿ ಗುರುವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಿದ್ದ ವೈದ್ಯೆ ಸುನೀತಾ ಹಾಗೂ ಸಿಬ್ಬಂದಿ ಮೇಲೆ ವ್ಯಾಕ್ಸಿನ್ ಏಕೆ ಕೊಡುವುದಿಲ್ಲ ಎಂದು ಸುಳ್ಳು ಆರೋಪ ಮಾಡಿ ಗುಂಪು ಹಲ್ಲೆಗೆ ಮುಂದಾಗಿದೆ ಎಂದು ಆರೋಪಿಸಲಾಗಿದೆ.
ಈ ಕುರಿತು ಡಾ.ಸುನೀತಾ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಗೆ ಸ್ಥಳೀಯ ಮಾಜಿ ಕಾರ್ಪೋರೇಟರ್ ಹಾಗೂ ಅದೇ ಆಸ್ಪತ್ರೆಯ ಮತ್ತೊಬ್ಬ ವೈದ್ಯನ ಕುಮ್ಮಕ್ಕು ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.