ಸಾಂಕೇತಿಕ ಚಿತ್ರ 
ರಾಜ್ಯ

ವಿಜಯಪುರ: ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತು 25 ವರ್ಷದ ವ್ಯಕ್ತಿ ಆತ್ಮಹತ್ಯೆ

ಪ್ರೀತಿಸಿ ಮದುವೆಯಾದ ಪತ್ನಿ ಪಕ್ಕದ ಮನೆಯವನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಪತಿ ಫೇಸ್ ಬುಕ್‍ನಲ್ಲಿ ವೀಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿಜಯಪುರ: ಪ್ರೀತಿಸಿ ಮದುವೆಯಾದ ಪತ್ನಿ ಪಕ್ಕದ ಮನೆಯವನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಪತಿ ಫೇಸ್ ಬುಕ್‍ನಲ್ಲಿ ವೀಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡಾತ.

ಎರಡು ವರ್ಷಗಳ ಹಿಂದೆ ವೆಂಕಟೇಶ್ ಯುವತಿ ಓರ್ವಳಿಗೆ ಪ್ರೀತಿಸಿ ಮದುವೆಯಾಗಿದ್ದ. ಈತನ ಪಕ್ಕದ ಮನೆಯ ಸಹೋದರ ಸಂಬಂಧಿ ಶ್ರೀಶೈಲ್ ಎಂಬುವವನೊಂದಿಗೆ ಪತ್ನಿ ಪರಾರಿಯಾಗಿದ್ದಳು. ಈ ಕುರಿತು ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ವೆಂಕಟೇಶ್ ದೂರು ಕೂಡ ನೀಡಿದ್ದ. ಆದರೆ, ಪತ್ನಿ, ತಾನು ವೆಂಕಟೇಶ್ ನೊಂದಿಗೆ ಬಾಳುವುದಿಲ್ಲ. ಪ್ರಿಯಕರ ಶ್ರೀಶೈಲ್ ನೊಂದಿಗೆ ಸಂಸಾರ ಮಾಡುವುದಾಗಿ ಹೇಳಿದ್ದಳು. ಹೀಗಾಗಿ ಆಕೆಯ ಹಕ್ಕುಗಳ ಬಗ್ಗೆ ಪತಿ ವೆಂಕಟೇಶ್ ಗೆ ಪೊಲೀಸರು ಮನವರಿಕೆ ಮಾಡಿದ್ದರು. ಇದರಿಂದ ಮನನೊಂದು ವೆಂಕಟೇಶ್ ನೇಣಿಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೂ ಮುನ್ನ ‘ತನ್ನ ಸಾವಿಗೆ ಶ್ರೀಶೈಲ್ ಹೊಣೆ’ ಎಂದು ಹೇಳಿ ಫೇಸ್ ಬುಕ್ ಲೈವ್ ಮಾಡಿ ನೇಣಿಗೆ ಶರಣಾಗಿದ್ದಾನೆ.

ಫೇಸ್ ಬುಕ್ ನಲ್ಲಿ ಈ ವೀಡಿಯೋ ಕಂಡು ಜಮೀನಿನಲ್ಲಿ ನೇಣು ಬಿಗಿದುಕೊಂಡು ಒದ್ದಾಡುತ್ತಿದ್ದ ವೆಂಕಟೇಶ್ ಪ್ರಾಣ ಉಳಿಸಲು, ಸ್ಥಳೀಯರು ಯತ್ನಿಸಿದ್ದಾರೆ. ಆದರೆ, ತಾಳಿಕೋಟೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆಯೇ ವೆಂಕಟೇಶ್ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!