ಸಂಗ್ರಹ ಚಿತ್ರ 
ರಾಜ್ಯ

ಕಾವೇರಿ ತೀರ್ಥೋದ್ಭವಕ್ಕೆ ಕೋವಿಡ್ ಆತಂಕ: 2 ತಿಂಗಳು ಕೊಡಗು ಪ್ರವಾಸೋದ್ಯಮ ನಿಷೇಧಿಸಲು ಆಗ್ರಹ

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಏರಿಳಿತದ ನಡುವೆಯೂ ರಾಜ್ಯ ಸರ್ಕಾರ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಒಂದಷ್ಟು ಮಾರ್ಗಸೂಚಿಗಳ ಜೊತೆ ಮುಕ್ತ ಅವಕಾಶ ಮಾಡಿಕೊಟ್ಟಿದೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಏರಿಳಿತದ ನಡುವೆಯೂ ರಾಜ್ಯ ಸರ್ಕಾರ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಒಂದಷ್ಟು ಮಾರ್ಗಸೂಚಿಗಳ ಜೊತೆ ಮುಕ್ತ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ವಾರಾಂತ್ಯಗಳಲ್ಲಿ ಕೊಡಗು ಜಿಲ್ಲೆಗೆ ಹೆಚ್ಚು ಪ್ರವಾಸಿಗರು ಅಗಮಿಸುತ್ತಿದ್ದಾರೆ.

ಇದರಿಂದ ಪ್ರವಾಸೋದ್ಯಮ ಅವಲಂಬಿಸಿಕೊಂಡು ಬದುಕು ನಡೆಸುತ್ತಿರುವವರು ಚೇತರಿಕೆ ಕಾಣ್ಣುತ್ತಿದ್ದರೆ, ಇದೀಗ ಕೊಡಗು ಜಿಲ್ಲೆಯ ಜನ ಎರಡು ತಿಂಗಳ ಕಾಲ ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಶುಕ್ರವಾರ ಕೊಡಗಿನ ಜನ, ವಿವಿಧ ಸಂಘಟನೆಗಳು ಹಾಗೂ ಸಮಾನ ಮನಸ್ಕರನ್ನು ಒಳಗೊಂಡ 'ಸೇವ್ ಕೊಡಗು ಫ್ರಮ್ ಟೂರಿಸ್ಟ್' ತಂಡ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ ಪ್ರವಾಸೋದ್ಯಮವನ್ನು ಸಂಪೂರ್ಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ನೀಡಿದೆ.

ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿರುವ ಕೊಡಗಿನ ಸಾಂಪ್ರದಾಯಿಕ ಹಬ್ಬ ತುಲಾ ಸಂಕ್ರಮಣ ಆಚರಣೆಯ ಹಿತದೃಷ್ಟಿಯಿಂದ ಹಾಗೂ ಶಾಲಾ- ಕಾಲೇಜುಗಳ ಪುನರಾರಂಭದ ಹಿನ್ನೆಲೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಈ ಕಠಿಣ ನಿಯಮವನ್ನು ಜಾರಿಗೊಳಿಸಬೇಕೆಂದು ತಂಡ ಒತ್ತಾಯಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದಲ್ಲಿ ಮುಸ್ಲಿಮರು PM, CM ಆಗದಿರುವುದಕ್ಕೆ ಕಾರಣ ಏನು ಗೊತ್ತ? Owaisi ಮುಸ್ಲಿಮರ ದೊಡ್ಡ ಶತ್ರು: ಮೌಲಾನಾ ಸಾಜಿದ್

'ಪ್ರಧಾನ್ ರಾಜೀನಾಮೆಯಿಂದ ಭಾರತ ಅಸ್ಥಿರಗೊಳಿಸುವ ವಿದೇಶಿ ಶಕ್ತಿಗಳ ಸಂಚು ವಿಫಲ': ಕೈಲಾಶ್ ವಿಜಯವರ್ಗೀಯ

UP ಚುನಾವಣೆ: ಈಗಲೇ ಮೈತ್ರಿ ಮಾತುಕತೆ ಆರಂಭಿಸೋಣ; ಚುನಾವಣೆ ಬಳಿಕ ಅತ್ತರೆ ಪ್ರಯೋಜನ ಇಲ್ಲ- ಅಖಿಲೇಶ್ ಗೆ ಓವೈಸಿ ಆಫರ್!

ಮಹಾ'ಸಂಚಲನ: ರಾಷ್ಟ್ರ ರಾಜಕಾರಣಕ್ಕೆ ದೇವೇಂದ್ರ ಫಡ್ನವಿಸ್ ಶಿಫ್ಟ್?

3rd T20I: 15ರ ವಯಸ್ಸಿನಲ್ಲೇ ವಿಶ್ವದಾಖಲೆ! ಜಿಂಬಾಬ್ವೆ ವಿರುದ್ಧ ಮತ್ತೊಮ್ಮೆ ಅಬ್ಬರಿಸಿದ Vaibhav Sooryavanshi