ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹಾಡಹಗಲೇ ವ್ಯಕ್ತಿಯ ಬರ್ಬರ ಕೊಲೆ

ಹಾಡಹಗಲೇ ದುಷ್ಕರ್ಮಿಗಳು ವ್ಯಕ್ತಿ ಓರ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಹಾಡಹಗಲೇ ದುಷ್ಕರ್ಮಿಗಳು ವ್ಯಕ್ತಿ ಓರ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದವರನ್ನು ರಾಮಮೂರ್ತಿನಗರದ ಬೋವಿ ಕಾಲೋನಿ ನಿವಾಸಿ ಕುಳ್ಳ ವೆಂಕಟೇಶ್ ಎಂದು ಗುರುತಿಸಲಾಗಿದೆ.

ಆಟೋದಲ್ಲಿ ಬಂದಿದ್ದ ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಕುಳ್ಳ ವೆಂಕಟೇಶ್​ ಅವರಿಗೆ  ಮೊದಲು ಡಿಕ್ಕಿ ಹೊಡೆದಿದ್ದಾರೆ. ನಂತರ ಅವರು ಕೆಳಗೆ ಬೀಳುತ್ತಿದ್ದಂತೆ ಐವರು ದುಷ್ಕರ್ಮಿಗಳ ತಂಡ ಲಾಂಗು - ಮಚ್ಚುಗಳಿಂದ ಮಾರಕ ದಾಳಿ ನಡೆಸಿದೆ.  ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಮೀನು ವಿಚಾರಕ್ಕೆ ಸಂಬಂಧಿಸಿ ಕೊಲೆಯಾಗಿರಬಹುದುಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ದೇವರಾಜ್, ಆವಲಹಳ್ಳಿ ಮತ್ತು ಕೆ.ಆರ್.ಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT