ಸುರೇಶ್ ಅಂಗಡಿ 
ರಾಜ್ಯ

ಬೆಳಗಾವಿ- ಬೆಂಗಳೂರು ರೈಲಿಗೆ ಸುರೇಶ್ ಅಂಗಡಿ ಎಕ್ಸ್‌ಪ್ರೆಸ್‌ ಹೆಸರು: ಬಸವರಾಜ ಬೊಮ್ಮಾಯಿ

ಬೆಳಗಾವಿ-ಬೆಂಗಳೂರು ರೈಲಿಗೂ 'ಸುರೇಶ್ ಅಂಗಡಿ ಎಕ್ಸಪ್ರೆಸ್' ಹೆಸರು ಇಡಲು ತಕ್ಷಣ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಬೆಳಗಾವಿ: ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಕನಸನ್ನು ನನಸು ಮಾಡಲು ಧಾರವಾಡ-ಬೆಳಗಾವಿ ರೈಲ್ವೆ ಮಾರ್ಗಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಹಣವನ್ನು ಬಿಡುಗಡೆ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯ ಸಾವಗಾಂವ ರಸ್ತೆಯಲ್ಲಿರುವ ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾನದ ಆವರಣದಲ್ಲಿ ಸ್ಥಾಪಿಸಿರುವ ದಿವಂಗತ ಸುರೇಶ ಅಂಗಡಿ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಬೆಳಗಾವಿ-ಬೆಂಗಳೂರು ರೈಲಿಗೂ 'ಸುರೇಶ್ ಅಂಗಡಿ ಎಕ್ಸಪ್ರೆಸ್' ಹೆಸರು ಇಡಲು ತಕ್ಷಣ ಪ್ರಸ್ತಾಪ ಸಲ್ಲಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರು, ಸುರೇಶ್ ಅಂಗಡಿ ಅಜಾತ ಶತ್ರು. ವೈಚಾರಿಕವಾಗಿ ಎಷ್ಟೆ ವ್ಯತ್ಯಾಸ ಇದ್ದರೂ ಸಹನೆಯಿಂದ ಎಲ್ಲರ ಹೃದಯ ಗೆದ್ದವರು. ಸಮರ್ಥ ನಾಯಕನ ಕೈಗೆ ಆಧಿಕಾರ ಕೊಟ್ಟರೆ ಏನಾಗುತ್ತದೆ ಎನ್ನುವುದಕ್ಕೆ ಸುರೇಶ ಅಂಗಡಿ ಸ್ಪಷ್ಟ ಸಾಕ್ಷಿ. ರೈಲ್ವೆ ಇಲಾಖೆಯಲ್ಲಿ ನೆನೆಗುದಿಗೆ ಬಿದ್ದ ಯೋಜನೆಗಳಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಪರಿಹಾರ ಕಲ್ಪಿಸಿ ಕ್ರಾಂತಿ ಮಾಡಿದವರು. ರೈಲ್ವೆ ಮಂಡಳಿಯಲ್ಲಿ ಹಣಕಾಸು ವ್ಯವಹಾರಗಳ ಅನುಮತಿ ಪಡೆಯುವುದು ಸವಾಲಿನ ಕೆಲಸ ಎಂದು ಸಿಎಂ ಹಾಡಿ ಹೊಗಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT