ಸುರೇಶ್ ಅಂಗಡಿ 
ರಾಜ್ಯ

ಬೆಳಗಾವಿ- ಬೆಂಗಳೂರು ರೈಲಿಗೆ ಸುರೇಶ್ ಅಂಗಡಿ ಎಕ್ಸ್‌ಪ್ರೆಸ್‌ ಹೆಸರು: ಬಸವರಾಜ ಬೊಮ್ಮಾಯಿ

ಬೆಳಗಾವಿ-ಬೆಂಗಳೂರು ರೈಲಿಗೂ 'ಸುರೇಶ್ ಅಂಗಡಿ ಎಕ್ಸಪ್ರೆಸ್' ಹೆಸರು ಇಡಲು ತಕ್ಷಣ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಬೆಳಗಾವಿ: ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಕನಸನ್ನು ನನಸು ಮಾಡಲು ಧಾರವಾಡ-ಬೆಳಗಾವಿ ರೈಲ್ವೆ ಮಾರ್ಗಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಹಣವನ್ನು ಬಿಡುಗಡೆ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯ ಸಾವಗಾಂವ ರಸ್ತೆಯಲ್ಲಿರುವ ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾನದ ಆವರಣದಲ್ಲಿ ಸ್ಥಾಪಿಸಿರುವ ದಿವಂಗತ ಸುರೇಶ ಅಂಗಡಿ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಬೆಳಗಾವಿ-ಬೆಂಗಳೂರು ರೈಲಿಗೂ 'ಸುರೇಶ್ ಅಂಗಡಿ ಎಕ್ಸಪ್ರೆಸ್' ಹೆಸರು ಇಡಲು ತಕ್ಷಣ ಪ್ರಸ್ತಾಪ ಸಲ್ಲಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರು, ಸುರೇಶ್ ಅಂಗಡಿ ಅಜಾತ ಶತ್ರು. ವೈಚಾರಿಕವಾಗಿ ಎಷ್ಟೆ ವ್ಯತ್ಯಾಸ ಇದ್ದರೂ ಸಹನೆಯಿಂದ ಎಲ್ಲರ ಹೃದಯ ಗೆದ್ದವರು. ಸಮರ್ಥ ನಾಯಕನ ಕೈಗೆ ಆಧಿಕಾರ ಕೊಟ್ಟರೆ ಏನಾಗುತ್ತದೆ ಎನ್ನುವುದಕ್ಕೆ ಸುರೇಶ ಅಂಗಡಿ ಸ್ಪಷ್ಟ ಸಾಕ್ಷಿ. ರೈಲ್ವೆ ಇಲಾಖೆಯಲ್ಲಿ ನೆನೆಗುದಿಗೆ ಬಿದ್ದ ಯೋಜನೆಗಳಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಪರಿಹಾರ ಕಲ್ಪಿಸಿ ಕ್ರಾಂತಿ ಮಾಡಿದವರು. ರೈಲ್ವೆ ಮಂಡಳಿಯಲ್ಲಿ ಹಣಕಾಸು ವ್ಯವಹಾರಗಳ ಅನುಮತಿ ಪಡೆಯುವುದು ಸವಾಲಿನ ಕೆಲಸ ಎಂದು ಸಿಎಂ ಹಾಡಿ ಹೊಗಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರಿಸಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT