ಕಟ್ಟಡ ಕುಸಿದ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಪರಿಶೀಲನೆ 
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು 3 ಅಂತಸ್ತಿನ ಕಟ್ಟಡ ಕುಸಿತ; ಡೈರಿ ಸರ್ಕಲ್ ಬಳಿ ದುರ್ಘಟನೆ, ನಾಲ್ವರಿಗೆ ಗಾಯ

ನಗರದಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ವಿಲ್ಸನ್ ಗಾರ್ಡನ್ ಸಮೀಪದ ಲಕ್ಕಸಂದ್ರದಲ್ಲಿ ನಿನ್ನೆ 3 ಅಂತಸ್ತಿನ ಮನೆ ಕುಸಿದು ಬಿದ್ದ ಅರ್ಧ ಕಿಲೋ ಮೀಟರ್ ಮುಂದೆ ಕೆಎಂಎಫ್ ಕ್ವಾರ್ಟರ್ಸ್ ನೊಳಗಿರುವ 50 ವರ್ಷದ ಕಟ್ಟಡ ಕುಸಿದುಬಿದ್ದಿದೆ. ಇದು ಡೇರಿ ಸರ್ಕಲ್ ಬಳಿ ಇರುವ ಬಮೂಲ್ ನೌಕಕರ ಕ್ವಾರ್ಟರ್ಸ್ ಆಗಿದೆ.

ಬೆಂಗಳೂರು: ನಗರದಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ವಿಲ್ಸನ್ ಗಾರ್ಡನ್ ಸಮೀಪದ ಲಕ್ಕಸಂದ್ರದಲ್ಲಿ ನಿನ್ನೆ 3 ಅಂತಸ್ತಿನ ಮನೆ ಕುಸಿದು ಬಿದ್ದ ಅರ್ಧ ಕಿಲೋ ಮೀಟರ್ ಮುಂದೆ ಕೆಎಂಎಫ್ ಕ್ವಾರ್ಟರ್ಸ್ ನೊಳಗಿರುವ 50 ವರ್ಷದ ಕಟ್ಟಡ ಬಮೂಲ್ ನೌಕರರು ನೆಲೆಸಿರುವ ಮೂರು ಅಂತಸ್ತಿನ ಕಟ್ಟಡ ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಸಿದುಬಿದ್ದಿದೆ.

40 ವರ್ಷದ ಹಿಂದೆ ನಿರ್ಮಿಸಿರುವ ಹಳೆ ಕಟ್ಟಡದಲ್ಲಿ ಬಿರುಕು ಬಿಡಲು ಆರಂಭವಾಯಿತು ಎಂದು ನಿವಾಸಿಗಳು ಹೇಳುತ್ತಿದ್ದಾರೆ. ಕಟ್ಟಡ ಕುಸಿಯುತ್ತಿದ್ದಂತೆ ವಸ್ತುಗಳನ್ನೆಲ್ಲಾ ಬಿಟ್ಟು ಪ್ರಾಣರಕ್ಷಣೆಯ ಕಾಳಜಿಯಿಂದ ನಿವಾಸಿಗಳೆಲ್ಲರೂ ಓಡಿಕೊಂಡು ಹೊರಗೆ ಬಂದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಕೂಡಲೇ ಅಕ್ಕಪಕ್ಕದವರಿಗೂ ಎಚ್ಚರಿಸಿದರು. ಮೊದಲ ಮಹಡಿಯಿಂದ ನಿವಾಸಿಗಳೆಲ್ಲ ಹೊರಗೆ ಬರುತ್ತಿದ್ದಂತೆ ಎರಡನೇ ಮತ್ತು ಮೂರನೇ ಮಹಡಿಯಿಂದ ಜನ ಹೊರಗೆ ಬಂದರು.

ಹೀಗೆ ಒಂದಾದ ಮೇಲೊಂದರಂತೆ ದುರಂತ ಸಂಭವಿಸುತ್ತಿರುವುದು ನಿಜಕ್ಕೂ ನಗರದ ಜನತೆಯನ್ನು ಆತಂಕಕ್ಕೀಡುಮಾಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ,ಪೊಲೀಸರು, ಬಿಬಿಎಂಪಿ ಸಿಬ್ಬಂದಿ ಬಂದು ಕಾರ್ಯಾಚರಣೆ ನಡೆಸುತ್ತಿದ್ದಾರೆ. 

ದುರಂತದಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಕಟ್ಟಡ ಕುಸಿತದ ವೇಳೆ ಸಿಕ್ಕಿಬಿದ್ದಿದ್ದ ಎರಡು ಶ್ವಾನಗಳನ್ನು ರಕ್ಷಿಸಲಾಗಿದೆ. ಕಟ್ಟಡ ಬೀಳುವ ಸೂಚನೆ ಸಿಕ್ಕ ಕೂಡಲೇ ಪೋಷಕರು ಮಗುವನ್ನು ಹೊರಗೆ ಕರೆತಂದು ರಕ್ಷಿಸಿದ್ದಾರೆ.ಇಂದು ಕೂಡ ಕಟ್ಟಡ ಕುಸಿತದಲ್ಲಿ ಭಾರೀ ಅನಾಹುತ ತಪ್ಪಿದೆ.

ಕುಸಿತಗೊಂಡ ಕಟ್ಟಡ 50 ವರ್ಷದ ಹಳೆಯದ್ದಾಗಿದೆ. ನಾಳೆ ಕೆಎಂಎಫ್​ನಲ್ಲಿ ಸಿಎಂ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಟ್ಟಡದಲ್ಲಿ 18 ಕುಟುಂಬ ವಾಸವಾಗಿತ್ತು. ಕೆಎಂಎಫ್ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಕಟ್ಟಡ ಕುಸಿಯಲು ಆರಂಭವಾಗುತ್ತಿದ್ದಂತೆ ಮನೆಯಿಂದ ಹೊರ ಓಡಿದ್ದಾರೆ. ಇದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಮೂಲ್ ಅಧಿಕಾರಿಗಳು ನಿರ್ಲಕ್ಷ್ಯ?: ಕಟ್ಟಡ ಬಿರುಕು ಬಿಡುವ ಸ್ಥಿತಿಯಲ್ಲಿದೆ, ಕಳಪೆಯಾಗಿದೆ ಎಂದು ನಿವಾಸಿಗಳು ಈ ಹಿಂದೆಯೇ ದೂರು ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದೇ ಇಂದಿನ ದುರ್ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಕಟ್ಟಡ ಕುಸಿತ ಕಂಡು ಅಕ್ಕಪಕ್ಕದವರೂ ಕೂಡ ಭಯದಿಂದ ತಮ್ಮ ಮನೆ ತೊರೆಯುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT