ಸಂಗ್ರಹ ಚಿತ್ರ 
ರಾಜ್ಯ

ಎನ್‍ಇಪಿ ಆಶಯಗಳ ಅನುಷ್ಠಾನ: ಇನ್ಫೋಸಿಸ್ ಜೊತೆ ಶೀಘ್ರದಲ್ಲೇ 3 ಒಡಂಬಡಿಕೆ- ಸಚಿವ ಅಶ್ವತ್ಥ್ ನಾರಾಯಣ್

ವಿದ್ಯಾರ್ಥಿಗಳ ಕೌಶಲ ಕಲಿಕೆಗೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‍ಇಪಿ-2020) ಆಶಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಐಟಿ ದಿಗ್ಗಜ ಇನ್ಫೋಸಿಸ್ ಕಂಪನಿ ಸದ್ಯದಲ್ಲೇ 3 ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕಲಿವೆ ಎಂದು ತಿಳಿದುಬಂದಿದೆ. 

ಬೆಂಗಳೂರು: ವಿದ್ಯಾರ್ಥಿಗಳ ಕೌಶಲ ಕಲಿಕೆಗೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‍ಇಪಿ-2020) ಆಶಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಐಟಿ ದಿಗ್ಗಜ ಇನ್ಫೋಸಿಸ್ ಕಂಪನಿ ಸದ್ಯದಲ್ಲೇ 3 ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕಲಿವೆ ಎಂದು ತಿಳಿದುಬಂದಿದೆ. 

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಕಾಸಸೌಧದಲ್ಲಿ ನಡೆದ ಇನ್ಫೋಸಿಸ್ ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಾಲೇಜು ವಿದ್ಯಾರ್ಥಿಗಳಿಗೆ ಕೌಶಲ ಕಲಿಸುವ 3 ಸಾವಿರಕ್ಕೂ ಹೆಚ್ಚು ಕೋರ್ಸ್‍ಗಳಿರುವ  ‘ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್’ ಬಳಕೆ, ಕಾಲೇಜು ಉಪನ್ಯಾಸಕರಿಗೆ ಡಿಜಿಟಲ್ ತರಬೇತಿ, ಉದ್ಯೋಗ ಸಂಬಂಧಿ ಮಾರ್ಗದರ್ಶನಕ್ಕಾಗಿ ‘ಕ್ಯಾಂಪಸ್ ಕನೆಕ್ಟ್’ ಹಾಗೂ ಉನ್ನತ ಶಿಕ್ಷಣ ಕಾಲೇಜುಗಳಿಗೆ ಇನ್ಫೋಸಿಸ್ ವತಿಯಿಂದ 15,000 ಡಿಬಾಂಡೆಡ್ ಕಂಪ್ಯೂಟರುಗಳ ಕೊಡುಗೆ, ಇವು ಒಡಂಬಡಿಕೆಗಳಾಗಿರುತ್ತವೆ ಎಂದು ಅವರು ವಿವರಿಸಿದರು.

‘ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್’ ಎಂಬುದು ಸಮಗ್ರ ಡಿಜಿಟಲ್ ಸಾಕ್ಷರತಾ , ಪರಿಣಾಮಕಾರಿ ಡಿಜಿಟಲ್ ಕಲಿಕೆ, ತಾಂತ್ರಿಕತೆ ಆಧಾರಿತ ಜೀವನ ಕೌಶಲ ಕೋರ್ಸ್‍ಗಳು, ಗೇಮಿಫಿಕೇಷನ್, ಪ್ರತ್ಯಕ್ಷ ತರಗತಿಗಳು, ಉದ್ಯಮ ಪ್ರಮಾಣಪತ್ರೀಕರಣ(ಇಂಡಸ್ಟ್ರಿ ಸರ್ಟಿಫಿಕೇಷನ್), ಮೇಕರ್ಸ್ ಲ್ಯಾಬ್, ವೃತ್ತಿ ಮಾರ್ಗದರ್ಶನ(ಉನ್ನತ ಶಿಕ್ಷಣ)ವನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

ಸ್ಮಾರ್ಟ್ ಕ್ಲಾಸ್ ರೂಮ್‍ಗಳಿಗೆ ಗೆಸ್ಚರ್ ಕಂಪ್ಯೂಟಿಂಗ್, ಬಯೋಮೆಟ್ರಿಕ್ಸ್ ತಂತ್ರಜ್ಞಾನ ಅಳವಡಿಕೆ, ತರಬೇತಿಗಾಗಿ ವಚ್ರ್ಯುಯಲ್ ರಿಯಾಲಿಟಿ, ಆಗ್ಮೆಂಟೆಡ್ ರಿಯಾಲಿಟಿ ತಾಂತ್ರಿಕತೆ ಬಳಕೆ, ಕಲಿಕಾ ದತ್ತಾಂಶವನ್ನು ಸಾಧನೆಯ ಫಲಿತಾಂಶದ ಸಂಯೋಜನೆ, ಆರೋಗ್ಯಕರ ಸ್ಪರ್ಧಾ ಮನೋಭಾವ ಮೂಡಿಸಲು ಗೇಮಿಫಿಕೇಷನ್ ಮತ್ತು ಡಿಜೈನ್ ತತ್ವಗಳ ಬಳಕೆ, ಪಠ್ಯಸಾಮಗ್ರಿ ರೂಪಿಸಲು ಆಟೋಮೇಷನ್ ಹಾಗೂ ರೊಬೋಟಿಕ್ ಉಪಕರಣಗಳ ಬಳಕೆ ಇವು ಇದರ ಭಾಗವಾಗಿರುತ್ತವೆ ಎಂದು ಅವರು ತಿಳಿಸಿದರು.

ಈ ಒಡಂಬಡಿಕೆಗಳ ಭಾಗವಾಗಿ ಸಂಸ್ಥೆಗಳ ನಡುವೆ ಉತ್ಕೃಷ್ಟ ಕ್ರಮಗಳ ವಿನಿಮಯಕ್ಕಾಗಿ ‘ಎನ್‍ಇಪಿ ಕಮ್ಯುನಿಟಿ’ಯನ್ನು ಸ್ಥಾಪಿಸಲಾಗುತ್ತದೆ. ಈ ಮೂಲಕ ಎನ್.ಇ.ಪಿ. ರೂಪುರೇಷೆಗಳನ್ನು ಅನುಷ್ಠಾನಗೊಳಿಸಲು ಸಂಸ್ಥೆಗಳಿಗೆ ಮಾರ್ಗದರ್ಶನ ನೀಡಲಾಗುತ್ತದೆ. ಪ್ರತಿಭಾವಂತರನ್ನು ಉತ್ತೇಜಿಸುವುದಕ್ಕಾಗಿ ಕೆಡಿಇಎಂ (ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್) ಹಾಗೂ ಇನ್ಫೋಸಿಸ್ ನಡುವೆ ಸಹಭಾಗಿತ್ವ ಏರ್ಪಡಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT