ಕಟ್ಟಡ ಕುಸಿದು ಬಿದ್ದಿರುವುದು 
ರಾಜ್ಯ

ಲಕ್ಕಸಂದ್ರ ಕಟ್ಟಡ ಕುಸಿತ ಪ್ರಕರಣ: ಮನೆ ಮಾಲೀಕನ ಬಂಧನ

3 ಅಂತಸ್ತಿನ 60 ವರ್ಷಕ್ಕೂ ಹಳೆಯದಾದ ಶಿಥಿಲವಾಗಿದ್ದ ಕಟ್ಟಡ ಸೋಮವಾರ ಕುಸಿದು ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡುಗೋಡಿ ಪೊಲೀಸರು ಬುಧವಾರ ಮನೆ ಮಾಲೀಕನನ್ನು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: 3 ಅಂತಸ್ತಿನ 60 ವರ್ಷಕ್ಕೂ ಹಳೆಯದಾದ ಶಿಥಿಲವಾಗಿದ್ದ ಕಟ್ಟಡ ಸೋಮವಾರ ಕುಸಿದು ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡುಗೋಡಿ ಪೊಲೀಸರು ಬುಧವಾರ ಮನೆ ಮಾಲೀಕನನ್ನು ಬಂಧನಕ್ಕೊಳಪಡಿಸಿದ್ದಾರೆ. 

ಘಟನೆ ಸಂಭವಿಸುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ಕಟ್ಟಡದ ಮಾಲೀಕ ಸುರೇಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ. 

ಕಟ್ಟಡ ಬೀಳುವ ಹಂತಕ್ಕೆ ಬಂದಿದ್ದರೂ ನಿರ್ಲಕ್ಷ್ಯ ತೋರಿ ಕಾರ್ಮಿಕರಿಗೆ ಮನೆ ಬಾಡಿಗೆ ನೀಡಿದ್ದ ಹಿನ್ನೆಲೆಯಲ್ಲಿ ಸುರೇಶ್ ನನ್ನು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಆತನತ ವಿರುದ್ಧ ಈಗಾಗಲೇ ನಿರ್ಲಕ್ಷ್ಯ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಇನ್ನು ಕಟ್ಟಡ ಕುಸಿದು ಬಿದ್ದ ಒಂದೇ ದಿನಕ್ಕೆ ಅವಶೇಷಗಳನ್ನು ತೆರವು ಮಾಡಲಾಗಿದೆ. ಸ್ಥಳಕ್ಕೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮಂಗಳವಾರವೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಲಕ್ಕಸಂದ್ರದಲ್ಲಿ ಸುರೇಶ್'ಗೆ ಸೇರಿದ ಮೂರು ಅಂತಸ್ತಿನ ಕಟ್ಟಡದಲ್ಲಿ ಕಳೆದರಡು ವರ್ಷಗಳಿಂದ ಯಾರೂ ವಾಸವಾಗಿರಲಿಲ್ಲ. ಇಥ್ತೀಚೆಗೆ ಖಾಲಿ ಇದ್ದ ಕಟ್ಟಡದಲ್ಲಿ ಮೆಟ್ರೋ ಮಾರ್ಗದ ಕಾಮಗಾರಿಗಾಗಿ ಬಂದಿದ್ದ 40 ಮಂದಿ ಕಾರ್ಮಿಕರು ವಾಸವಿದ್ದರು. ಕಟ್ಟಡ ಕುಸಿಯುವ ಮುನ್ಸೂಚನೆ ಸಿಕ್ಕಿದ ಕೂಡಲೇ ಅವರನ್ನು ಅಗ್ನಿಶಾಮಕ ಸಿಬ್ಬಂದಿ ಮನೆಯಿಂದ ಹೊರಗೆ ಕಳುಹಿಸಿದ್ದರು. ಪರಿಣಾಮ ಭಾರೀ ಅನಾಹುತವೊಂದು ತಪ್ಪಿತಂದಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT