ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ; ಕಾಲು ಕತ್ತರಿಸಿದ ನಿವೃತ್ತ ಯೋಧ

ಬೈಲಹೊಂಗಲದ ನ್ಯಾಯಾಲಯದ ಆವರಣದಲ್ಲೇ ನಿವೃತ್ತ ಯೋಧನೊಬ್ಬ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಾಲು ಕತ್ತರಿಸಿದ ಘಟನೆ ನಡೆದಿದೆ.

ಬೆಳಗಾವಿ: ಬೈಲಹೊಂಗಲದ ನ್ಯಾಯಾಲಯದ ಆವರಣದಲ್ಲೇ ನಿವೃತ್ತ ಯೋಧನೊಬ್ಬ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಾಲು ಕತ್ತರಿಸಿದ ಘಟನೆ ನಡೆದಿದೆ.

ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಾನಂದ ಅಡಕಿ ಎಂಬಾತ ಪತ್ನಿ ಜಯಮಾಲಾ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಆಕೆಯ ಕಾಲನ್ನೇ ಕತ್ತರಿಸಿದ್ದಾನೆ. 11 ವರ್ಷಗಳ ಹಿಂದೆ ಧಾರವಾಡ ಜಿಲ್ಲೆಯ ವರೂರ್ ಗ್ರಾಮದ ಜಯಮಾಲಾರನ್ನು ಸೈನಿಕ ಶಿವಾನಂದ ಮದುವೆಯಾಗಿದ್ದ. ಆದರೆ ಹಣಕಾಸಿನ ವಿಚಾರಕ್ಕೆ ಪತಿ-ಪತ್ನಿಯ ಮಧ್ಯೆ ಕಲಹ ಇತ್ತು ಎನ್ನಲಾಗಿದೆ. 

ಈ ಹಿನ್ನೆಲೆಯಲ್ಲಿ ಬೈಲಹೊಂಗಲ ದಿವಾಣಿ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಹಾಜರಾಗಲು ಕೋರ್ಟ್ ಗೆ ಬಂದ ಪತ್ನಿಯ ಮೇಲೆ ಶಿವಪ್ಪ ಅಡಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಯಲ್ಲಿ ಜಯಮಾಲಾ ತೀವ್ರವಾಗಿ ಗಾಯಗೊಂಡಿದ್ದಾರೆ. ಹೀಗಾಗಿ, ಆಕೆಯನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಂತರ ಆರೋಪಿ ಶಿವಾನಂದ ಅಡಕಿ ಪೊಲೀಸರಿಗೆ ಶರಣಾಗಿದ್ದಾನೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT