ಸಂಗ್ರಹ ಚಿತ್ರ 
ರಾಜ್ಯ

ಕೋಲಾರದಲ್ಲಿ ಮಂಗಗಳ ಮಾರಣ ಹೋಮ: ರಸ್ತೆ ಬದಿ ಬಿದ್ದಿದ್ದ ಚೀಲದಲ್ಲಿ 16 ಕೋತಿಗಳ ಮೃತದೇಹ ಪತ್ತೆ!

ಹಾಸನ ಜಿಲ್ಲೆಯಲ್ಲಿ ಕೋತಿಗಳ ಮಾರಣಹೋಮ ಪ್ರಕರಣ ಮರೆಯುವ ಮುನ್ನವೇ ಕೋಲಾರದಲ್ಲಿ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ. ಕೋಲಾರದ ಟಮಕ ಬಳಿ ಯಾರು ಕೀಡಿಗೇಡಿಗಳು 16 ಕೋತಿಗಳಿಗೆ ಆಹಾರದಲ್ಲಿ ವಿಷ ಉಣಿಸಿ ಕೊಲ್ಲುವ ಮೂಲಕ ವಿಕೃತಿಯನ್ನು ಮೆರದಿದ್ದಾರೆ.

ಕೋಲಾರ: ಹಾಸನ ಜಿಲ್ಲೆಯಲ್ಲಿ ಕೋತಿಗಳ ಮಾರಣಹೋಮ ಪ್ರಕರಣ ಮರೆಯುವ ಮುನ್ನವೇ ಕೋಲಾರದಲ್ಲಿ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ. ಕೋಲಾರದ ಟಮಕ ಬಳಿ ಯಾರು ಕೀಡಿಗೇಡಿಗಳು 16 ಕೋತಿಗಳಿಗೆ ಆಹಾರದಲ್ಲಿ ವಿಷ ಉಣಿಸಿ ಕೊಲ್ಲುವ ಮೂಲಕ ವಿಕೃತಿಯನ್ನು ಮೆರದಿದ್ದಾರೆ. 

ರಸ್ತೆ ಬದಿ ಬಿದ್ದಿದ್ದ ಚೀಲದಲ್ಲಿ 16 ಕೋತಿಗಳ ಮೃತದೇಹ ಪತ್ತೆಯಾಗಿದೆ. ಯಾರೂ ಕೀಡಿಗೇಡಿಗಳು‌ ಕೋತಿಗಳನ್ನು ಸಾಯಿಸಿ ಚೀಲಗಳಲ್ಲಿ ಬಿಸಾಡಿದ್ದಾರೆಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಮೃತಪಟ್ಟಿರುವ ಕೋತಿಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. 

ಸತ್ತಿರುವ ಕೋತಿಗಳಲ್ಲಿ ನಾಲ್ಕು ಪುಟ್ಟ ಮರಿಗಳು ಸೇರಿದಂತೆ 16 ಕೋರಿಗಳು ಪಾಪಿಗಳ ಕೃತ್ಯಕ್ಕೆ ಪ್ರಾಣ ತೆತ್ತಿವೆ.

ಇತ್ತೀಚಿಗೆ ಇದೇ ರೀತಿಯ ಪ್ರಕರಣವೊಂದು ಹಾಸನ ಜಿಲ್ಲೆಯಲ್ಲಿ ನಡೆದಿತ್ತು. ಸುಮಾರು 40 ಕ್ಕೂ ಹೆಚ್ಚು ಕೋತಿಗಳು ಅಸುನೀಗಿದವು.ಈ ಪ್ರಕರಣ ಇನ್ನು ಜನರ ಮನಸ್ಸಿನಿಂದ ಮಾಸುವ ಮುನ್ನವೇ ಕೋಲಾರದಲ್ಲಿ ವೊಂದು ಇಂತಹವುದೇ ಪ್ರಕರಣ ನಡೆದಿರುವುದು ಬೇಸರ ತಂದಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೋಲಾರ ಜಿಲ್ಲಾ ಆಯುಕ್ತ ಡಾ.ಸೆಲ್ವಮಣಿಯವರು ಈ ಸಂಬಂಧ ವಿವರವಾದ ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೆ, ಪೋಲೀಸರೊಂದಿಗೆ ಸಮನ್ವಯ ಸಾಧಿಸಿ ಆರೋಪಿಗಳನ್ನು ಶೀಘ್ರಗತಿಯಲ್ಲಿ ಬಂಧಿಸುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು, ಮಂಗಗಳ ಕಾಟ ಎದುರಿಸುತ್ತಿರುವವರು ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು. ಕೂಡಲೇ ಅಧಿಕಾರಿಗಳು ಈ ಸಂಬಂಧ ಕ್ರಮ ಕೈಗೊಳ್ಳಲಿದ್ದಾರೆಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

Goa Nightclub Tragedy: ಡ್ಯಾನ್ಸ್ ಫ್ಲೋರ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ 100 ಮಂದಿ ಇದ್ದರು..!

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಎಸ್‌ಸಿ-ಎಸ್‌ಟಿ ಕೋಟಾ ಹೆಚ್ಚಳಕ್ಕೆ ಪ್ರಧಾನಿ ಸಹಾಯ ಕೋರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಉಗ್ರಪ್ಪ ಒತ್ತಾಯ

SCROLL FOR NEXT