ಸಂಗ್ರಹ ಚಿತ್ರ 
ರಾಜ್ಯ

ಶಿರೂರು ಮಠಕ್ಕೆ ಪೀಠಾಧಿಪತಿ ನೇಮಕ ವಿವಾದ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶ್ರೀ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತರಿಗೆ ಮಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿ ಆದೇಶಿಸಿದೆ.

ಬೆಂಗಳೂರು: ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶ್ರೀ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತರಿಗೆ ಮಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿ ಆದೇಶಿಸಿದೆ.

ಬಾಲ ಸನ್ಯಾಸವನ್ನು ನಿರ್ಬಂಧಿಸುವಂತಹ ಯಾವುದೇ ನಿಯಮಗಳು ಅಥವಾ ಶಾಸನಗಳಿಲ್ಲ. ಇನ್ನು ಪ್ರಕರಣದಲ್ಲಿ ಅಪ್ರಾಪ್ತನ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬುದನ್ನು ಸಾಬೀತುಪಡಿಸಲು ಅರ್ಜಿದಾರರು ವಿಫಲರಾಗಿದ್ದಾರೆ. 800 ವರ್ಷಗಳಿಗೂ ಹಿಂದಿನಿಂದ ನಡೆದುಕೊಂಡು ಬಂದಿರುವ ಪದ್ಧತಿಯಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವ ಅಗತ್ಯತೆ ಕಂಡು ಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟು ಪಿಐಎಲ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಅಪ್ರಾಪ್ತ ಪೀಠಾಧಿಪತಿ ನೇಮಕ ಮಾಡಿದನ್ನು ಪ್ರಶ್ನಿಸಿ ಶಿರೂರು ಮಠದ ಭಕ್ತರಾದ ಲಾತವ್ಯ ಆಚಾರ್ಯ ಮತ್ತಿತರರು ಸಲ್ಲಿಸಿದ್ದ ಪಿಐಎಲ್ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಸಿಜೆ ಎಸ್.ಸಿ ಶರ್ಮಾ ನೇತೃತ್ವದ ವಿಭಾಗೀಯ ಕಳೆದ ಶುಕ್ರವಾರ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ಇಂದು ತೀರ್ಪು ಪ್ರಕಟಿಸಿದ ಪೀಠ, ಬೌದ್ಧ ಧರ್ಮದಲ್ಲಿಯೂ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಸನ್ಯಾಸ ದೀಕ್ಷೆ ನೀಡಲಾಗುತ್ತದೆ. 18 ವರ್ಷ ತುಂಬುವ ಮೊದಲು ಸನ್ಯಾಸ ಸ್ವೀಕರಿಸಬಾರದು ಎಂದು ನಿರ್ಧರಿಸುವ ಯಾವುದೇ ಕಾನೂನು ಅಥವಾ ಶಾಸನಾತ್ಮಕ ನಿಯಮಗಳಿಲ್ಲ. ಹೀಗಾಗಿ ಅರ್ಜಿದಾರರ ಮನವಿಯನ್ನು ಪರಿಗಣಿಸಲಾಗದು ಎಂದು ಪೀಠ ತಿಳಿಸಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT