ಸಂಗ್ರಹ ಚಿತ್ರ 
ರಾಜ್ಯ

ಶಿರೂರು ಮಠಕ್ಕೆ ಪೀಠಾಧಿಪತಿ ನೇಮಕ ವಿವಾದ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶ್ರೀ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತರಿಗೆ ಮಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿ ಆದೇಶಿಸಿದೆ.

ಬೆಂಗಳೂರು: ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶ್ರೀ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತರಿಗೆ ಮಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿ ಆದೇಶಿಸಿದೆ.

ಬಾಲ ಸನ್ಯಾಸವನ್ನು ನಿರ್ಬಂಧಿಸುವಂತಹ ಯಾವುದೇ ನಿಯಮಗಳು ಅಥವಾ ಶಾಸನಗಳಿಲ್ಲ. ಇನ್ನು ಪ್ರಕರಣದಲ್ಲಿ ಅಪ್ರಾಪ್ತನ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬುದನ್ನು ಸಾಬೀತುಪಡಿಸಲು ಅರ್ಜಿದಾರರು ವಿಫಲರಾಗಿದ್ದಾರೆ. 800 ವರ್ಷಗಳಿಗೂ ಹಿಂದಿನಿಂದ ನಡೆದುಕೊಂಡು ಬಂದಿರುವ ಪದ್ಧತಿಯಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವ ಅಗತ್ಯತೆ ಕಂಡು ಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟು ಪಿಐಎಲ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಅಪ್ರಾಪ್ತ ಪೀಠಾಧಿಪತಿ ನೇಮಕ ಮಾಡಿದನ್ನು ಪ್ರಶ್ನಿಸಿ ಶಿರೂರು ಮಠದ ಭಕ್ತರಾದ ಲಾತವ್ಯ ಆಚಾರ್ಯ ಮತ್ತಿತರರು ಸಲ್ಲಿಸಿದ್ದ ಪಿಐಎಲ್ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಸಿಜೆ ಎಸ್.ಸಿ ಶರ್ಮಾ ನೇತೃತ್ವದ ವಿಭಾಗೀಯ ಕಳೆದ ಶುಕ್ರವಾರ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ಇಂದು ತೀರ್ಪು ಪ್ರಕಟಿಸಿದ ಪೀಠ, ಬೌದ್ಧ ಧರ್ಮದಲ್ಲಿಯೂ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಸನ್ಯಾಸ ದೀಕ್ಷೆ ನೀಡಲಾಗುತ್ತದೆ. 18 ವರ್ಷ ತುಂಬುವ ಮೊದಲು ಸನ್ಯಾಸ ಸ್ವೀಕರಿಸಬಾರದು ಎಂದು ನಿರ್ಧರಿಸುವ ಯಾವುದೇ ಕಾನೂನು ಅಥವಾ ಶಾಸನಾತ್ಮಕ ನಿಯಮಗಳಿಲ್ಲ. ಹೀಗಾಗಿ ಅರ್ಜಿದಾರರ ಮನವಿಯನ್ನು ಪರಿಗಣಿಸಲಾಗದು ಎಂದು ಪೀಠ ತಿಳಿಸಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?