ಸಂಗ್ರಹ ಚಿತ್ರ 
ರಾಜ್ಯ

ಶಿಥಿಲಗೊಂಡ ಕಟ್ಟಡಗಳ ಮರು ಸಮೀಕ್ಷೆ ನಡೆಸಿ: ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ

ನಗರದ ಶಿಥಿಲಾವಸ್ಥೆಯಲ್ಲಿರುವ ಎಲ್ಲಾ ಕಟ್ಟಡಗಳ ಬಗ್ಗೆ 15 ದಿನಗಳಲ್ಲಿ ಸಮೀಕ್ಷೆ ನಡೆಸಿ ನಿಖರ ವರದಿ ನೀಡುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಬುಧವಾರ ಸೂಚನೆ ನೀಡಿದ್ದಾರೆ.

ಬೆಂಗಳೂರು: ನಗರದ ಶಿಥಿಲಾವಸ್ಥೆಯಲ್ಲಿರುವ ಎಲ್ಲಾ ಕಟ್ಟಡಗಳ ಬಗ್ಗೆ 15 ದಿನಗಳಲ್ಲಿ ಸಮೀಕ್ಷೆ ನಡೆಸಿ ನಿಖರ ವರದಿ ನೀಡುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಬುಧವಾರ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಸಮೀಕ್ಷೆ ಮಾಡುವ ಸಂಬಂಧ ವರ್ಚುವಲ್ ಮಾಧ್ಯಮದಲ್ಲಿ ಎಲ್ಲಾ ವಲಯ ಆಯುಕ್ತರು ಮತ್ತು ಜಂಟಿ ಆಯುಕ್ತರ ಸಭೆ ನಡೆಸಿದರು. 

ನಗರದಲ್ಲಿ 2019 ಶಿಥಿಲಾವಸ್ಥೆಯಲ್ಲಿ ಇರುವ ಕಟ್ಟಡಗಳನ್ನು ಸಮೀಕ್ಷೆ ಮಾಡಿರುವ ಪ್ರಕಾರ ಇದೂವರೆಗೆ ಎಷ್ಟು ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂಬುದರ ಬಗ್ಗೆ ಆಯುಕ್ತರು ಎಂಟು ವಲಯಗಳಿಂದ ಮಾಹಿತಿ ಪಡೆದರು. 

ನಗರದಲ್ಲಿ 2019ರಲ್ಲಿ ಸಮೀಕ್ಷೆಯಲ್ಲಿ ಗುರುತಿಸಿದ್ದ 185 ಶಿಥಿಲಾವಸ್ಥೆಯ ಕಟ್ಟಡಗಳ ಪೈಕಿ ಈಗಾಗಲೇ 10 ಕಟ್ಟಡಗಳನ್ನು ನೆಲಸಮ ಮಾಡಿದ್ದು, ಬಾಕಿ 175 ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಬೇಕು. ಜೊತೆಗೆ ಆಯಾ ವಲಯಗಳಲ್ಲಿ ಸಂಬಂಧಪಟ್ಟ ಎಂಜಿನಿಯರ್ ಗಳು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಸ್ಥಳಕ್ಕೆ ಭೇಟಿ ನೀಡಿ ಮರು ಪರಿಶೀಲಿಸಬೇಕು. ಬಳಿಕ ಆ ಕಟ್ಟಡಗಳನ್ನು ನೆಲಸಮ ಮಾಡುವ ಸಲುವಾಗಿ ವಲಯವಾರು ಗುತ್ತಿಗೆದಾರರನ್ನು ನೇಮಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್