ಸಚಿವ ಕೆ ಎಸ್ ಈಶ್ವರಪ್ಪ 
ರಾಜ್ಯ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು

ತಮ್ಮ ವಾಕ್ ಪ್ರಹಾರ, ವಿರೋಧ ಪಕ್ಷದ ನಾಯಕರ ವಿರುದ್ಧ ತೀವ್ರ ಟೀಕೆ, ವಾದ-ವಿವಾದಗಳಿಂದ ಆಗಾಗ ಸುದ್ದಿಯಾಗುತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಉಡುಪಿ: ತಮ್ಮ ವಾಕ್ ಪ್ರಹಾರ, ವಿರೋಧ ಪಕ್ಷದ ನಾಯಕರ ವಿರುದ್ಧ ತೀವ್ರ ಟೀಕೆ, ವಾದ-ವಿವಾದಗಳಿಂದ ಆಗಾಗ ಸುದ್ದಿಯಾಗುತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಅದು ಬೆಳಗಾವಿ ಜಿಲ್ಲೆಯ ಹಿಂಡಲಗ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ. ಸಂತೋಷ್ ಪಾಟೀಲ್ ಗುತ್ತಿಗೆ ಕಾಮಗಾರಿಯೊಂದರಲ್ಲಿ ಸಚಿವ ಈಶ್ವರಪ್ಪ ವಿರುದ್ಧ 40% ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕೆಲ ತಿಂಗಳ ಹಿಂದೆ ಸುದ್ದಿಯಾಗಿದ್ದರು. ಅವರ ಆರೋಪವನ್ನು ತಳ್ಳಿಹಾಕಿದ್ದ ಹಿರಿಯ ಸಚಿವ ಈಶ್ವರಪ್ಪ ಸಂತೋಷ್ ಪಾಟೀಲ್ ವಿರುದ್ಧ ನ್ಯಾಯಾಲಯದ ಮೊರೆ ಹೋಗಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅದು ವಿಚಾರಣೆ ಹಂತದಲ್ಲಿರುವಾಗಲೇ ಸಂತೋಷ್ ಪಾಟೀಲ್ ನಿನ್ನೆ ಏಪ್ರಿಲ್ 12ರಂದು ಉಡುಪಿಯ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಿರುವ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. 

ಆತ್ಮಹತ್ಯೆಗೂ ಮುನ್ನ ತಮ್ಮ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂಬ ಸಂದೇಶವನ್ನು ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ವಾಟ್ಸಪ್ (Whatsapp) ಮಾಡಿದ್ದರು. ಹೀಗಾಗಿ ಸಚಿವರಾದ ಈಶ್ವರಪ್ಪ ರಾಜೀನಾಮೆ ನೀಡಬೇಕು ಮತ್ತು ಅವರ ವಿರುದ್ಧ ಎಫ್ ಐ ಆರ್ (FIR) ದಾಖಲಿಸಬೇಕು ಎಂದು ಕಾಂಗ್ರೆಸ್ (Congress) ಆಗ್ರಹಿಸಿತ್ತು. ಇದಾದ ಮೇಲೆ ನಿನ್ನೆ ಮಧ್ಯಾಹ್ನ ನಂತರ ನಡೆದ ಬೆಳವಣಿಗೆಯಲ್ಲಿ ಸಂತೋಷ್ ಆತ್ಮಹತ್ಯೆ ಸಂಬಂಧ  ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಮೊದಲ ಆರೋಪಿ ಸ್ಥಾನದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೆಸರು ಇದೆ.

ದಾಖಲಾದ ಎಫ್ಐಆರ್ ಬೆಳಗಾವಿ ಜಿಲ್ಲೆಯ ಹಳ್ಳಿಯಲ್ಲಿ ಕೈಗೊಂಡ ಕಾಮಗಾರಿಯಲ್ಲಿ ಬಂದ ಹಣದಲ್ಲಿ 40% ಕಮಿಷನ್ ನ್ನು ಸಚಿವ ಈಶ್ವರಪ್ಪ ಕೇಳಿದ್ದರು ಎಂದು ಸಂತೋಷ್ ಪಾಟೀಲ್ ಮಾಡಿದ್ದ ಆರೋಪದ ಮೇಲೆ ದೂರು ದಾಖಲಾಗಿದೆ. 

ಶಾಂಭವಿ ಲಾಡ್ಜ್ ಗೆ ಎಫ್ಎಸ್ಎಲ್ ತಂಡ: ಸಂತೋಷ್ ಪಾಟೀಲ್ ಮೃತದೇಹವಿರುವ ಉಡುಪಿಯ ಶಾಂಭವಿ ಲಾಡ್ಜ್ ಗೆ ಇದೀಗ ಮಂಗಳೂರಿನಿಂದ ಎಫ್ಎಸ್ಎಲ್ ತಂಡ ಬಂದಿದ್ದು, ಇಂದು ಮಧ್ಯಾಹ್ನ ನಂತರ ಮರಣೋತ್ತರ ಪರೀಕ್ಷೆ ನಡೆಯುವ ಸಾಧ್ಯತೆಯಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ