ಗುಡ್ಡ ಕುಸಿತದ ದೃಶ್ಯ 
ರಾಜ್ಯ

ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿತ: ನಾಲ್ವರ ಮೃತದೇಹ ಹೊರ ತೆಗೆದ ಸಿಬ್ಬಂದಿ!

ಉತ್ತರ ಕನ್ನಡದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ಮುಟ್ಟಳ್ಳಿಯ ಮನೆಯೊಂದರ ಮೇಲೆ ಗುಡ್ಡ ಕುಸಿದಿದ್ದು ಅವಶೇಷಗಳಡಿಯಲ್ಲಿ ಸಿಲುಕಿದ್ದ ನಾಲ್ವರ ಮೃತದೇಹಗಳನ್ನು ಎನ್ ಡಿಆರ್ಎಫ್ ಸಿಬ್ಬಂದಿ ಹೊರ ತೆಗೆದಿದ್ದಾರೆ. 

ಭಟ್ಕಳ: ಉತ್ತರ ಕನ್ನಡದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ಮುಟ್ಟಳ್ಳಿಯ ಮನೆಯೊಂದರ ಮೇಲೆ ಗುಡ್ಡ ಕುಸಿದಿದ್ದು ಅವಶೇಷಗಳಡಿಯಲ್ಲಿ ಸಿಲುಕಿದ್ದ ನಾಲ್ವರ ಮೃತದೇಹಗಳನ್ನು ಎನ್ ಡಿಆರ್ಎಫ್ ಸಿಬ್ಬಂದಿ ಹೊರ ತೆಗೆದಿದ್ದಾರೆ. 

ಅವಶೇಷಗಳ ಅಡಿ ಸಿಲುಕಿ ಮೃತಪಟ್ಟವರನ್ನು ಲಕ್ಷ್ಮೀ ನಾರಾಯಣ ನಾಯ್ಕ್, ಅನಂತ ನಾಯ್ಕ್, ಪ್ರವೀಣ ನಾಯ್ಕ್ ಹಾಗೂ ಲಕ್ಷ್ಮೀ ನಾಯ್ಕ್ ಎಂದು ಗುರುತಿಸಲಾಗಿದೆ. ಮನೆ ಮೇಲೆ ದಿಢೀರ್ ಗುಡ್ಡ ಕುಸಿದಿದ್ದರಿಂದ ಮನೆಯಲ್ಲಿದ್ದವರು ಹೊರಗೆ ಬರಲು ಸಾಧ್ಯವಾಗಿರಲಿಲ್ಲ. 

ಈ ಸುದ್ದಿ ತಿಳಿದ ಕೂಡಲೇ ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿತ್ತು. ಆದರೆ ಅವರ ಜೀವ ಉಳಿಸಲು ಸಾಧ್ಯವಾಗಿರಲಿಲ್ಲ. ಇನ್ನು ಸ್ಥಳೀಯರು ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರತೆಗೆದಿದ್ದಾರೆ. 

ಭಟ್ಕಳದಲ್ಲಿ ಭಾರೀ ಮಳೆಯಿಂದಾಗಿ ಎಲ್ಲಾ ಕಡೆ ನೀರು ತುಂಬಿ ಭಾರೀ ಅನಾಹುತ ಸಂಭವಿಸಿದೆ. ಶಿರಾಲಿ ಭಾಗದಲ್ಲಿ ಅನೇಕ ಮನೆಗಳಲ್ಲಿ ಸಿಕ್ಕಿ ಹಾಕಿಕೊಂಡಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಗ್ಗಂಟಿಗೆ ಸರ್ವಪಕ್ಷ ಒಗ್ಗಟ್ಟು: 'ರಾಜಕೀಯಕ್ಕಿಂತ ರಾಜ್ಯದ ಹಿತ ಮುಖ್ಯ' ಎಂದ CM ಡಿ.ಕೆ. ಶಿವಕುಮಾರ್

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌; ಒಪ್ಪಂದವಾದರೆ ಯುದ್ಧ ಅಂತ್ಯ, ಇಲ್ಲದಿದ್ದರೆ ಭಾರೀ ದಾಳಿ ಎಚ್ಚರಿಕೆ..!

'ನೀರು-ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ'; ನಿಮ್ಮ ದುರ್ವರ್ತನೆಯಿಂದಲೇ ಸಿಂಧು ಜಲ ಒಪ್ಪಂದ ಅಮಾನತು: ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಭಾರತ-ಚೀನಾ ಗಡಿ ವ್ಯಾಪಾರಕ್ಕೆ ಮರುಜೀವ: 6 ವರ್ಷಗಳ ಬಳಿಕ ನಾಥೂ ಲಾ ಗಡಿಯಲ್ಲಿ ವ್ಯಾಪಾರ ಚಟುವಟಿಕೆ ಪುನರಾರಂಭ..!

ಸಕಲೇಶಪುರ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ರೈಲು ಸಂಚಾರ ಸಂಪೂರ್ಣ ಸ್ಥಗಿತ; ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳ ಪರದಾಟ