ಬಿಬಿಎಂಪಿ ಕಚೇರಿ 
ರಾಜ್ಯ

ರಾಜಕೀಯ ನೇತಾರರಿಂದ ಪದೇ ಪದೇ ನಿಯಮ ಉಲ್ಲಂಘನೆ: ಒಂದೇ ಒಂದು ದೂರು ದಾಖಲಿಸದ ಬಿಬಿಎಂಪಿ!

ಹೈಕೋರ್ಟ್ ಮತ್ತು ಬಿಬಿಎಂಪಿ ಆದೇಶಗಳನ್ನು ಒಂದು ತಿಂಗಳಲ್ಲಿ ಮೂರನೇ ಬಾರಿ  ಫ್ಲೆಕ್ಸ್  ನಿಯಮ ಉಲ್ಲಂಘಿಸಲಾಗಿದೆ. ಆದರೆ ಬಿಬಿಎಂಪಿ ಇನ್ನೂ ಒಂದೇ ಒಂದು ಪ್ರಕರಣ ದಾಖಲಿಸಿಲ್ಲ.

ಬೆಂಗಳೂರು: ಹೈಕೋರ್ಟ್ ಮತ್ತು ಬಿಬಿಎಂಪಿ ಆದೇಶಗಳನ್ನು ಒಂದು ತಿಂಗಳಲ್ಲಿ ಮೂರನೇ ಬಾರಿ  ಫ್ಲೆಕ್ಸ್  ನಿಯಮ ಉಲ್ಲಂಘಿಸಲಾಗಿದೆ. ಆದರೆ ಬಿಬಿಎಂಪಿ ಇನ್ನೂ ಒಂದೇ ಒಂದು ಪ್ರಕರಣ ದಾಖಲಿಸಿಲ್ಲ.

ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಅವರ ಪುತ್ರ ಜೀಶನ್ ಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಬೆಂಬಲಿಗರು  ಹಾಗೂ ಜಮೀರ್ ಅಹಮದ್ ಖಾನ್ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ನಾಯಕರು ನಗರದಲ್ಲಿ ಫ್ಲೆಕ್ಸ್ ಮತ್ತು ಬ್ಯಾನರ್‌ ನಿಷೇಧಿಸುವ ಆದೇಶವನ್ನು ಉಲ್ಲಂಘಿಸಿದ್ದಾರೆ.

ಆಗಸ್ಟ್ 1 ರಂದು ಜಮೀರ್ ಅಹ್ಮದ್ ಅವರ ಜನ್ಮದಿನದಂದು, ಅವರ ಬೆಂಬಲಿಗರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ಕಾಕ್‌ಬರ್ನ್ ರಸ್ತೆ ಮತ್ತು ಸುತ್ತಮುತ್ತ ಫ್ಲೆಕ್ಸ್‌ಗಳನ್ನು ಹಾಕಿದರು. ಇತ್ತೀಚೆಗೆ ಚಾಮರಾಜನಗರ ಹಾಗೂ ಮಂಡ್ಯದ ಬಿಜೆಪಿ ಮುಖಂಡರು ವಿಧಾನಸೌಧದ ಬಳಿ ಹಾಗೂ ರಾಜಭವನ ರಸ್ತೆಯಲ್ಲಿ ಫ್ಲೆಕ್ಸ್‌ಗಳನ್ನು ಹಾಕಿದ್ದರು.

ಫ್ಲೆಕ್ಸ್‌ಗಳನ್ನು ಹಾಕುವವರ ವಿರುದ್ಧ ದಂಡ ವಿಧಿಸುವ ಮತ್ತು ಪ್ರಕರಣ ದಾಖಲಿಸುವ ಬಗ್ಗೆ ಬಿಬಿಎಂಪಿ  ಹೇಳುತ್ತದೆ. ಆದರೆ ಇದುವರೆಗೆ ಒಂದೇ ಒಂದು ಪ್ರಕರಣ ದಾಖಲಾಗಿಲ್ಲ ಎಂದು ನಾಗರಿಕರು ಆರೋಪಿಸಿದ್ದಾರೆ.

ನಗರದ ಸೌಂದರ್ಯವನ್ನು ವಿರೂಪಗೊಳಿಸಿದ್ದಕ್ಕಾಗಿ ಬಿಬಿಎಂಪಿ ಯಾರ ವಿರುದ್ಧವಾದರೂ  ಪ್ರಕರಣ ದಾಖಲಿಸಿದೆಯೇ ಎಂದು ಕಂದಾಯ ವಿಶೇಷ ಆಯುಕ್ತ ಆರ್‌ಎಲ್ ದೀಪಕ್ ಅವರನ್ನು ಪ್ರಶ್ನಿಸಲಾಯತು. ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲಿಸಬೇಕು ಎಂದು ಹೇಳಿದರು.  1,000 ದಂಡ ವಿಧಿಸಲಾಗುವುದು ಮತ್ತು ವ್ಯಕ್ತಿಯ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಬಿಬಿಎಂಪಿ ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!