ಸಂತ್ರಸ್ತರ ಮನೆಗೆ ಸಿಎಂ ಭೇಟಿ 
ರಾಜ್ಯ

ನೆರೆಹಾನಿ ತುರ್ತು ಪರಿಹಾರಕ್ಕೆ 500 ಕೋಟಿ ರೂ. ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ರಾಜ್ಯದಾದ್ಯಂತ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ 500 ಕೋಟಿ ರು.ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಾರವಾರ: ರಾಜ್ಯದಾದ್ಯಂತ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ 500 ಕೋಟಿ ರು.ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಟ್ಕಳ ತಾಲ್ಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಭೂ ಕುಸಿತದಿಂದ ನಾಲ್ವರು ಮೃತಪಟ್ಟ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯದಲ್ಲಿ 14 ಜಿಲ್ಲೆಗಳ 115 ಹಳ್ಳಿಗಳಲ್ಲಿ ಭಾರಿ ಮಳೆಯಿಂದಾಗಿ ನೆರೆ ಹಾನಿ ಸಂಭವಿಸಿದೆ. ಬುಧವಾರ ಮತ್ತೆ ತುಮಕೂರಿನಲ್ಲಿ ನಾಲ್ಕು ಜನ ಹಾಗೂ ವಿಜಯನಗರದಲ್ಲಿ ಓರ್ವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 600 ಮನೆಗಳು ಸಂಪೂರ್ಣ, 2 ಸಾವಿರಕ್ಕೂ ಹೆಚ್ಚು ಮನೆಗಳು ತೀವ್ರತರ ಹಾಗೂ 14 ಸಾವಿರಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಯಾಗಿದೆ. ಎಲ್ಲದಕ್ಕೂ ಕೂಡ ಅನುದಾನ ಬಿಡುಗಡೆ ಮಾಡಲು ಈಗಾಗಲೇ ಸೂಚಿಸಲಾಗಿದೆ. 21,431 ಹೆಕ್ಟೇರ್ ಪ್ರದೇಶ ಬೆಳೆ ನಾಶವಾಗಿದ್ದು, ಇದು ಇನ್ನೂ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಜಂಟಿ ಸಮೀಕ್ಷೆ ಮಾಡಬೇಕಾಗಿರುವುದರಿಂದ ವರದಿ ಬಂದ ತಕ್ಷಣ ಪರಿಹಾರ ವಿತರಿಸಲಾಗುವುದು ಎಂದರು.

ಇನ್ನು ಭಟ್ಕಳದಲ್ಲಿಯೂ ಭಾರಿ ಮಳೆಯಿಂದಾಗಿ ಮನೆಗಳಿಗೆ, ಅಂಗಡಿಗಳಿಗೆ ಹಾಗೂ ಬೋಟ್ ಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ಸುಮಾರು 40 ಕೋಟಿ ರೂ ಹಾನಿಯಾಗಿರುವ ಬಗ್ಗೆ ಸದ್ಯ ಅಂದಾಜಿಸಲಾಗಿದೆ. ಇದು ಇನ್ನೂ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಎಷ್ಟೇ ಹಾನಿಯಾದರೂ ಮನೆ, ಅಂಗಡಿ ಸೇರಿದಂತಡ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಕೂಡಲೇ ಪರಿಹಾರ ಒದಗಿಸಲು ಸಿದ್ಧವಿದೆ ಎಂದಿದ್ದಾರೆ.

ಕಂದಾಯ ಸಚಿವ ಆರ್.ಅಶೋಕ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಭಟ್ಕಳ ಶಾಸಕ ಸುನೀಲ್ ನಾಯ್ಕ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಆಗಮಿಸಿದ ಸಿಎಂ  ಗ್ರಾಮದ ಪರಿಸ್ಥಿತಿ ಹಾಗೂ ಭೂಕುಸಿತಕ್ಕೆ ಕಾರಣಗಳ ಕುರಿತು ಮಾಹಿತಿ ಪಡೆದರು. ಬೊಮ್ಮಾಯಿ ಅವರು ಭೂಕುಸಿತದಿಂದ  ಸಾವನ್ನಪ್ಪಿದ ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ 29 ಲಕ್ಷ ರೂ.ಗಳ ಚೆಕ್ ಅನ್ನು ಮೃತರ ಸಂಬಂಧಿಕರಿಗೆ ಹಸ್ತಾಂತರಿಸಿದರು.

ಭಾರೀ ಮಳೆಗೆ ವಿಂಧ್ಯಗಿರಿ ದೇಗುಲದ ಗೋಮಟೇಶ್ವರ ಮೂರ್ತಿಯ ಗೋಡೆ ಕುಸಿದು ಬಿದ್ದಿರುವ ಬಗ್ಗೆ ವರದಿಯಾಗಿದೆ. ಮದ್ದೂರು ಕೆರೆ ಒಡೆದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಎರಡನೇ ದಿನವೂ ಸಂಚಾರ ಸ್ಥಗಿತಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT