ರಸ್ತೆಗೆ ಟೊಮೊಟೋ ಸುರಿದ ರೈತರು 
ರಾಜ್ಯ

ಟೊಮೊಟೊ ಬೆಲೆ ಕೆಜಿಗೆ 1 ರುಪಾಯಿಗೆ ಕುಸಿತ: ಚಿತ್ರದುರ್ಗದಲ್ಲಿ ರಸ್ತೆಗೆ ಬೆಳೆ ಸುರಿದು ರೈತರ ಆಕ್ರೋಶ!

ಟೊಮೇಟೊ ಬೆಲೆಯಲ್ಲಿ ತೀವ್ರ ಕುಸಿತ ಉಂಟಾಗಿದ್ದು, ಶುಕ್ರವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದ ರೈತರು ತಮ್ಮ ಉತ್ಪನ್ನಗಳನ್ನು ರಸ್ತೆಗೆ ಸುರಿದಿದ್ದಾರೆ.

ಚಿತ್ರದುರ್ಗ: ಟೊಮೇಟೊ ಬೆಲೆಯಲ್ಲಿ ತೀವ್ರ ಕುಸಿತ ಉಂಟಾಗಿದ್ದು, ಶುಕ್ರವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದ ರೈತರು ತಮ್ಮ ಉತ್ಪನ್ನಗಳನ್ನು ರಸ್ತೆಗೆ ಸುರಿದಿದ್ದಾರೆ.

ಈ ವರ್ಷ ಮೇ ತಿಂಗಳಲ್ಲಿ ಕೆಜಿಗೆ 100 ರೂ.ಗೆ ಮಾರಾಟವಾಗಿದ್ದ ಟೊಮೇಟೊ ಬೆಲೆಯಲ್ಲಿ ಭಾರಿ ಕುಸಿತ ಕಂಡಿದ್ದು, 15 ಕೆಜಿ ಇರುವ ಟೊಮ್ಯಾಟೊ ಬಾಕ್ಸ್‌ ಅನ್ನು 10 ರುಪಾಯಿಗೂ ತೆಗೆದುಕೊಳ್ಳಲು ವ್ಯಾಪಾರಸ್ಥರು ಸಿದ್ಧರಿಲ್ಲ. ಇದರಿಂದ ಬೇಸರಗೊಂಡ ರೈತರು ಟೊಮೆಟೊವನ್ನು ರಾಷ್ಟ್ರೀಯ ಹೆದ್ದಾರಿ 150ಎ ರಸ್ತೆ ಮೇಲೆ ಸುರಿದು ಟ್ರಾಕ್ಟರ್‌ಗಳನ್ನು ಚಲಾಯಿಸಿದರು.

ಈ ಪ್ರದೇಶದಲ್ಲಿ ಸಂಸ್ಕರಣಾ ಘಟಕಗಳ ಕೊರತೆಯೂ ಟೊಮೆಟೊ ಬೆಳೆಗಾರರ ​​ಮೇಲೆ ಪರಿಣಾಮ ಬೀರುತ್ತಿದೆ. ಇತ್ತೀಚೆಗಷ್ಟೇ ಟೊಮೇಟೊ ದಾಖಲೆಯ ಬೆಲೆ ಬಾಚಿದ್ದರಿಂದ ಕಲ್ಲಹಳ್ಳಿ, ತೊರೆಕೋಲಮ್ಮನಹಳ್ಳಿ, ನಾಯಕನಹಟ್ಟಿ ಮತ್ತಿತರ ಭಾಗದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬಿತ್ತನೆ ಮಾಡಿದ್ದರು. ಆದರೆ ಮಾರುಕಟ್ಟೆಯಲ್ಲಿ ಉತ್ತಮ ಇಳುವರಿ  ಬಂದಿರುವುದರಿಂದ ಬೆಲೆ ಕುಸಿದಿದೆ.

ನಾಲ್ಕು ಎಕರೆಯಲ್ಲಿ ಟೊಮೇಟೊ ಬೆಳೆದಿದ್ದು, ಉತ್ತಮ ಇಳುವರಿ ಬಂದಿದೆ. ಶುಕ್ರವಾರ ನಾನು 150 ಬಾಕ್ಸ್ ಕೊಯ್ಲು ಮಾಡಿದ್ದ,  ಆದರೆ ವ್ಯಾಪಾರಿಗಳು ಬಾಕ್ಸ್ ಗೆ 10 ರೂಪಾಯಿಗೂ ತೆಗೆದುಕೊಳ್ಳಲು ಬರುತ್ತಿಲ್ಲ, ಹೀಗಾಗಿ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ ಪಕ್ಕದಲ್ಲಿ ಟೊಮೇಟೊ ಹಾಕಲು ನಿರ್ಧರಿಸಿದ್ದೇನೆ. ನನ್ನ ಹೂಡಿಕೆಯನ್ನು ಮರಳಿ ಪಡೆಯಲು ಸಾಧ್ಯವಾಗಲಿಲ್ಲ ಮತ್ತು ಈಗ ನಾನು 4 ಲಕ್ಷ ರೂಪಾಯಿ ಸಾಲವನ್ನು ಹೊಂದಿದ್ದೇನೆ ಎಂದು ಕಲ್ಲಹಳ್ಳಿಯ ರೈತ ಮಾರುತೇಶ್ ಹೇಳಿದ್ದಾರೆ.

ರಸ್ತೆಯಲ್ಲಿ ಸಾಗುವ ಜನರು, ಟ್ರಕ್ ಚಾಲಕರು ಮತ್ತು ಇತರರು ರಸ್ತೆ ಮೇಲೆ ಸುರಿದಿದ್ದ ಟೊಮೆಟೊಗಳನ್ನು  ತೆಗೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು. ಚಳ್ಳಕೆರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ವಿರೂಪಾಕ್ಷಪ್ಪ ಮಾತನಾಡಿ, ‘ಉತ್ತಮ ಗುಣಮಟ್ಟದ ಟೊಮೇಟೊ ಬಾಕ್ಸ್‌ಗೆ 60-70 ರೂ.ಗೆ ಮಾರಾಟವಾಗಿತ್ತು. ಅಂದರೆ ಕೇವಲ ರೂ. ಪ್ರತಿ ಕೆಜಿಗೆ 1 ರೂ. ಇದ್ದು ಉತ್ಪಾದನಾ ವೆಚ್ಚವನ್ನು ಸಹ ಪೂರೈಸುವುದಿಲ್ಲ ಎಂದು ತಿಳಿಸಿದ್ದಾರೆ.

ಗುರುವಾರ ಪ್ರತಿ ಬಾಕ್ಸ್‌ಗೆ 140 ರೂ. ಇತ್ತು, ಆದರೂ ಉತ್ಪಾದನಾ ವೆಚ್ಚ ಭರಿಸಲು ಆಗಿಲ್ಲ.  ಚಿಕ್ಕಮ್ಮನಹಳ್ಳಿ ಮಧ್ಯ ಕರ್ನಾಟಕದಲ್ಲಿಯೇ ಅತಿ ದೊಡ್ಡ ಟೊಮೆಟೊ ಮಾರುಕಟ್ಟೆಯನ್ನು ಹೊಂದಿದೆ. ಕೂಡ್ಲಿಗಿ, ಬಳ್ಳಾರಿ, ಮೊಳಕಾಲ್ಮುರು, ಚಿತ್ರದುರ್ಗ, ಹಿರಿಯೂರು, ರಾಯದುರ್ಗ, ಸಿರಾ, ಚಳ್ಳಕೆರೆ ಮತ್ತಿತರೆಡೆ ಬೆಳೆಯುವ ಟೊಮೇಟೊ ಇಲ್ಲಿಗೆ ತರಲಾಗುತ್ತದೆ. ಬೆಂಗಳೂರು, ತೆಲಂಗಾಣ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಕ್ಕೆ ಇಲ್ಲಿಂದ ಕಳುಹಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT