ಕೇಂದ್ರ ನೀತಿ ಆಯೋಗ 
ರಾಜ್ಯ

ನೀತಿ ಆಯೋಗ ಮಾದರಿಯಲ್ಲಿ ಕರ್ನಾಟಕ ಸರ್ಕಾರದಿಂದ ಎಸ್ಐಟಿಕೆ ರಚನೆ

ಕರ್ನಾಟಕ ರಾಜ್ಯ ಪರಿವರ್ತನೆ ಸಂಸ್ಥೆ (SITK)ಯನ್ನು ರಚಿಸಲು ರಾಜ್ಯ ಸರ್ಕಾರ ಕೊನೆಗೂ ಆದೇಶ ಹೊರಡಿಸಿದೆ. ಇದು ಕೇಂದ್ರ ಸರ್ಕಾರದ ನೀತಿ ಆಯೋಗದ ಮಾದರಿಯಲ್ಲಿ ಕರ್ನಾಟಕದಲ್ಲಿರುವ ರಾಜ್ಯ ನೀತಿ ಮತ್ತು ಯೋಜನೆ ಆಯೋಗವನ್ನು ಬದಲಾಯಿಸಲಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಪರಿವರ್ತನೆ ಸಂಸ್ಥೆ (SITK)ಯನ್ನು ರಚಿಸಲು ರಾಜ್ಯ ಸರ್ಕಾರ ಕೊನೆಗೂ ಆದೇಶ ಹೊರಡಿಸಿದೆ. ಇದು ಕೇಂದ್ರ ಸರ್ಕಾರದ ನೀತಿ ಆಯೋಗದ ಮಾದರಿಯಲ್ಲಿ ಕರ್ನಾಟಕದಲ್ಲಿರುವ ರಾಜ್ಯ ನೀತಿ ಮತ್ತು ಯೋಜನೆ ಆಯೋಗವನ್ನು ಬದಲಾಯಿಸಲಿದೆ.

ನವ ಭಾರತಕ್ಕೆ ಅನುಗುಣವಾಗಿ ನವ ಕರ್ನಾಟಕ ರೂಪಿಸಲು ಅದನ್ನು ಸಾಕಾರಗೊಳಿಸಲು ಹೊಸ ಸಂಸ್ಥೆಯನ್ನು ರಚಿಸಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಸ್ ಐಟಿಕೆಗೆ ಅಧ್ಯಕ್ಷರಾಗಿರುತ್ತಾರೆ. ಸರ್ಕಾರದ ಯೋಜನೆಗಳಲ್ಲಿ ತಜ್ಞರಾಗಿರುವ ಒಬ್ಬರು ಉಪಾಧ್ಯಕ್ಷರಾಗಿರುತ್ತಾರೆ.

ಎಸ್ ಐಟಿಕೆಯ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ರಾಜ್ಯ ಸರ್ಕಾರ ವರ್ಷಕ್ಕೆ 150 ಕೋಟಿ ರೂಪಾಯಿ ಒದಗಿಸಲಿದೆ. ಯೋಜನೆ, ಆರ್ಥಿಕತೆ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯೋಗ ಮತ್ತು ಶುದ್ಧ ಇಂಧನ ವಿಭಾಗಗಳಲ್ಲಿ ಸಲಹೆಗಾರರಾಗಿ ಎಂಟು ಮಂದಿ ತಜ್ಞರಿರುತ್ತಾರೆ.

ಯೋಜನೆ, ಕಾರ್ಯಕ್ರಮ ಅನುಷ್ಠಾನ ಮತ್ತು ಅಂಕಿಅಂಶಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಎಸ್‌ಐಟಿಕೆಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಲಹೆಗಾರರಾಗಿರುತ್ತಾರೆ. ಬಡತನ ನಿರ್ಮೂಲನೆ, ಆದಾಯ, ಆಹಾರ ಮತ್ತು ಪೋಷಣೆ, ಸೇವೆಗಳ ಸರಳೀಕರಣ, ಸ್ವಚ್ಛ ಮತ್ತು ಹಸಿರು ಇಂಧನ ಮತ್ತು ಇತರ ವಿಷಯಗಳಲ್ಲಿ ತಜ್ಞರನ್ನು ನೇಮಿಸಲಾಗುತ್ತದೆ.

ರಾಜ್ಯ ಸರ್ಕಾರವು IISc, IIMB ಮತ್ತು NLSIU ಸೇರಿದಂತೆ 14 ಹೆಸರಾಂತ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಮಧ್ಯಸ್ಥಗಾರರನ್ನಾಗಿ ನಾಮನಿರ್ದೇಶನ ಮಾಡುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT