ಕೇಂದ್ರ ನೀತಿ ಆಯೋಗ 
ರಾಜ್ಯ

ನೀತಿ ಆಯೋಗ ಮಾದರಿಯಲ್ಲಿ ಕರ್ನಾಟಕ ಸರ್ಕಾರದಿಂದ ಎಸ್ಐಟಿಕೆ ರಚನೆ

ಕರ್ನಾಟಕ ರಾಜ್ಯ ಪರಿವರ್ತನೆ ಸಂಸ್ಥೆ (SITK)ಯನ್ನು ರಚಿಸಲು ರಾಜ್ಯ ಸರ್ಕಾರ ಕೊನೆಗೂ ಆದೇಶ ಹೊರಡಿಸಿದೆ. ಇದು ಕೇಂದ್ರ ಸರ್ಕಾರದ ನೀತಿ ಆಯೋಗದ ಮಾದರಿಯಲ್ಲಿ ಕರ್ನಾಟಕದಲ್ಲಿರುವ ರಾಜ್ಯ ನೀತಿ ಮತ್ತು ಯೋಜನೆ ಆಯೋಗವನ್ನು ಬದಲಾಯಿಸಲಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ಪರಿವರ್ತನೆ ಸಂಸ್ಥೆ (SITK)ಯನ್ನು ರಚಿಸಲು ರಾಜ್ಯ ಸರ್ಕಾರ ಕೊನೆಗೂ ಆದೇಶ ಹೊರಡಿಸಿದೆ. ಇದು ಕೇಂದ್ರ ಸರ್ಕಾರದ ನೀತಿ ಆಯೋಗದ ಮಾದರಿಯಲ್ಲಿ ಕರ್ನಾಟಕದಲ್ಲಿರುವ ರಾಜ್ಯ ನೀತಿ ಮತ್ತು ಯೋಜನೆ ಆಯೋಗವನ್ನು ಬದಲಾಯಿಸಲಿದೆ.

ನವ ಭಾರತಕ್ಕೆ ಅನುಗುಣವಾಗಿ ನವ ಕರ್ನಾಟಕ ರೂಪಿಸಲು ಅದನ್ನು ಸಾಕಾರಗೊಳಿಸಲು ಹೊಸ ಸಂಸ್ಥೆಯನ್ನು ರಚಿಸಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಸ್ ಐಟಿಕೆಗೆ ಅಧ್ಯಕ್ಷರಾಗಿರುತ್ತಾರೆ. ಸರ್ಕಾರದ ಯೋಜನೆಗಳಲ್ಲಿ ತಜ್ಞರಾಗಿರುವ ಒಬ್ಬರು ಉಪಾಧ್ಯಕ್ಷರಾಗಿರುತ್ತಾರೆ.

ಎಸ್ ಐಟಿಕೆಯ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ರಾಜ್ಯ ಸರ್ಕಾರ ವರ್ಷಕ್ಕೆ 150 ಕೋಟಿ ರೂಪಾಯಿ ಒದಗಿಸಲಿದೆ. ಯೋಜನೆ, ಆರ್ಥಿಕತೆ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯೋಗ ಮತ್ತು ಶುದ್ಧ ಇಂಧನ ವಿಭಾಗಗಳಲ್ಲಿ ಸಲಹೆಗಾರರಾಗಿ ಎಂಟು ಮಂದಿ ತಜ್ಞರಿರುತ್ತಾರೆ.

ಯೋಜನೆ, ಕಾರ್ಯಕ್ರಮ ಅನುಷ್ಠಾನ ಮತ್ತು ಅಂಕಿಅಂಶಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಎಸ್‌ಐಟಿಕೆಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಲಹೆಗಾರರಾಗಿರುತ್ತಾರೆ. ಬಡತನ ನಿರ್ಮೂಲನೆ, ಆದಾಯ, ಆಹಾರ ಮತ್ತು ಪೋಷಣೆ, ಸೇವೆಗಳ ಸರಳೀಕರಣ, ಸ್ವಚ್ಛ ಮತ್ತು ಹಸಿರು ಇಂಧನ ಮತ್ತು ಇತರ ವಿಷಯಗಳಲ್ಲಿ ತಜ್ಞರನ್ನು ನೇಮಿಸಲಾಗುತ್ತದೆ.

ರಾಜ್ಯ ಸರ್ಕಾರವು IISc, IIMB ಮತ್ತು NLSIU ಸೇರಿದಂತೆ 14 ಹೆಸರಾಂತ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಮಧ್ಯಸ್ಥಗಾರರನ್ನಾಗಿ ನಾಮನಿರ್ದೇಶನ ಮಾಡುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT