ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರ: ದನದ ಕೊಟ್ಟಿಗೆ ಗೋಡೆ ಕುಸಿದು ಇಬ್ಬರು ಪುಟ್ಟ ಮಕ್ಕಳ ಸಾವು

ಜಿಲ್ಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಎಡೆಬಿಡದೆ ಸುರಿದ ಮಳೆಗೆ ದನದ ಕೊಟ್ಟಿಗೆ ಕುಸಿದು ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.

ರಾಮನಗರ: ಜಿಲ್ಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಎಡೆಬಿಡದೆ ಸುರಿದ ಮಳೆಗೆ ದನದ ಕೊಟ್ಟಿಗೆ ಕುಸಿದು ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಮೃತರನ್ನು ನೇಪಾಳ ಮೂಲದ ಇಶಿಕಾ (3) ಮತ್ತು ಆಕೆಯ ಸೋದರ ಸಂಬಂಧಿ ಫರ್ವೀನ್  ಸುನಾರ್ (4) ಎಂದು ಗುರುತಿಸಲಾಗಿದೆ. ಮಾಗಡಿ ತಾಲೂಕಿನ ಸೋಲೂರಿನ ಕೂಡ್ಲೂರು ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ 2.30ರ ಸುಮಾರಿಗೆ  ಈ ಘಟನೆ ನಡೆದಿದೆ.

ಇಶಿಕಾ ತನ್ನ ತಂದೆ ಮತ್ತು ತಾಯಿ ಕೆಲಸ ಮಾಡುತ್ತಿದ್ದ ಫಾರ್ಮ್‌ಹೌಸ್‌ನಲ್ಲಿ ಶೆಡ್‌ನಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ, ಅವರನ್ನು ಭೇಟಿ ಮಾಡಲು  ಅಜ್ಜಿ ಮೀನಾ ಮತ್ತು ಸೋದರ ಸಂಬಂಧಿ ಫರ್ವೀನ್ ಸುನರ್ ಬೆಂಗಳೂರಿನಿಂದ ಬಂದಿದ್ದರು. ಇಬ್ಬರು ಮಕ್ಕಳಾದ ಇಶಿಕಾ ತಾಯಿ ಮೋನಿಶಾ ಮತ್ತು ಮೀನಾ ಶೆಡ್‌ನಲ್ಲಿ ಮಲಗಿದ್ದರೆ, ಆಕೆಯ ತಂದೆ ಹೊರಗೆ ಮಲಗಿದ್ದರು.

ನಿರಂತರ ಮಳೆಯಿಂದಾಗಿ ಗಂಗರಂಗಮ್ಮ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಯ ಗೋಡೆಯು ಪಕ್ಕದಲ್ಲೇ ಇದ್ದ ಶೆಡ್ ಮೇಲೆ ಕುಸಿದಿದೆ. ಇದರಿಂದಾಗಿ ನಿದ್ರೆಯಲ್ಲಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.  ಘಟನೆಯಲ್ಲಿ ಮೀನಾ ಮತ್ತು ಮೋನಿಷಾ ಎಂಬುವವರಿಗೆ ಗಾಯಗಳಾಗಿದ್ದು, ಗ್ರಾಮಸ್ಥರು ರಕ್ಷಿಸಿದ್ದಾರೆ  ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದ ಗಂಗರಂಗಮ್ಮ ಅವರ ವಿರುದ್ಧ ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

J&K ಭಾರತದ ಅವಿಭಾಜ್ಯ ಅಂಗ: ಅಮೆರಿಕ ರಾಯಭಾರಿಗೆ ಪಾಕ್ ಸಮನ್ಸ್, ಅದು ಅವರ ವಿಷಯ; ಸಿಎಂ ಒಮರ್ ಅಬ್ದುಲ್ಲಾ

ಮೇಕೆದಾಟು ಅಣೆಕಟ್ಟು: ಕುಡಿಯುವ ನೀರಿಗಾಗಿ ಅಗತ್ಯವಿರುವ 5 ಟಿಎಂಸಿ ಹೊರತುಪಡಿಸಿ, ಉಳಿದ ನೀರು ತಮಿಳುನಾಡಿಗೆ- ಸಿಎಂ ಡಿಕೆ ಶಿವಕುಮಾರ್

ಕರ್ನಾಟಕದ ರೈಲು ನಿಲ್ದಾಣಗಳಲ್ಲಿರುವ ಮಳಿಗೆಗಳ ಮೇಲೆ ಆಹಾರ ಇಲಾಖೆ ದಿಢೀರ್ ದಾಳಿ: ಅವಧಿ ಮೀರಿದ ಉತ್ಪನ್ನಗಳು, ಬಣ್ಣಗಳು ಪತ್ತೆ!

NEET ಪ್ರತಿಭಟನೆ: ಪೊಲೀಸ್ ದೌರ್ಜನ್ಯ, ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸುಪ್ರೀಂಕೋರ್ಟ್!

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ತಮ್ಮದೇ ಸರ್ಕಾರದ ವಿರುದ್ಧ ತಿರುಗಿಬಿದ್ದ ರವಿಕುಮಾರ್ ಗಣಿಗ; ರೈತರಿಂದ ಪ್ರತಿಭಟನೆ, ಹೆದ್ದಾರಿ ತಡೆದು ಆಕ್ರೋಶ