ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರ: ದನದ ಕೊಟ್ಟಿಗೆ ಗೋಡೆ ಕುಸಿದು ಇಬ್ಬರು ಪುಟ್ಟ ಮಕ್ಕಳ ಸಾವು

ಜಿಲ್ಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಎಡೆಬಿಡದೆ ಸುರಿದ ಮಳೆಗೆ ದನದ ಕೊಟ್ಟಿಗೆ ಕುಸಿದು ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.

ರಾಮನಗರ: ಜಿಲ್ಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಎಡೆಬಿಡದೆ ಸುರಿದ ಮಳೆಗೆ ದನದ ಕೊಟ್ಟಿಗೆ ಕುಸಿದು ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಮೃತರನ್ನು ನೇಪಾಳ ಮೂಲದ ಇಶಿಕಾ (3) ಮತ್ತು ಆಕೆಯ ಸೋದರ ಸಂಬಂಧಿ ಫರ್ವೀನ್  ಸುನಾರ್ (4) ಎಂದು ಗುರುತಿಸಲಾಗಿದೆ. ಮಾಗಡಿ ತಾಲೂಕಿನ ಸೋಲೂರಿನ ಕೂಡ್ಲೂರು ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ 2.30ರ ಸುಮಾರಿಗೆ  ಈ ಘಟನೆ ನಡೆದಿದೆ.

ಇಶಿಕಾ ತನ್ನ ತಂದೆ ಮತ್ತು ತಾಯಿ ಕೆಲಸ ಮಾಡುತ್ತಿದ್ದ ಫಾರ್ಮ್‌ಹೌಸ್‌ನಲ್ಲಿ ಶೆಡ್‌ನಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ, ಅವರನ್ನು ಭೇಟಿ ಮಾಡಲು  ಅಜ್ಜಿ ಮೀನಾ ಮತ್ತು ಸೋದರ ಸಂಬಂಧಿ ಫರ್ವೀನ್ ಸುನರ್ ಬೆಂಗಳೂರಿನಿಂದ ಬಂದಿದ್ದರು. ಇಬ್ಬರು ಮಕ್ಕಳಾದ ಇಶಿಕಾ ತಾಯಿ ಮೋನಿಶಾ ಮತ್ತು ಮೀನಾ ಶೆಡ್‌ನಲ್ಲಿ ಮಲಗಿದ್ದರೆ, ಆಕೆಯ ತಂದೆ ಹೊರಗೆ ಮಲಗಿದ್ದರು.

ನಿರಂತರ ಮಳೆಯಿಂದಾಗಿ ಗಂಗರಂಗಮ್ಮ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಯ ಗೋಡೆಯು ಪಕ್ಕದಲ್ಲೇ ಇದ್ದ ಶೆಡ್ ಮೇಲೆ ಕುಸಿದಿದೆ. ಇದರಿಂದಾಗಿ ನಿದ್ರೆಯಲ್ಲಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.  ಘಟನೆಯಲ್ಲಿ ಮೀನಾ ಮತ್ತು ಮೋನಿಷಾ ಎಂಬುವವರಿಗೆ ಗಾಯಗಳಾಗಿದ್ದು, ಗ್ರಾಮಸ್ಥರು ರಕ್ಷಿಸಿದ್ದಾರೆ  ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದ ಗಂಗರಂಗಮ್ಮ ಅವರ ವಿರುದ್ಧ ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT