ಆರ್.ಅಶೋಕ ಸುದ್ದಿಗೋಷ್ಠಿ 
ರಾಜ್ಯ

ರಾಜ್ಯದಲ್ಲಿ 14 ಪ್ರವಾಹ ಪೀಡಿತ ಜಿಲ್ಲೆ; 8,197 ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ, ಸಂತ್ರಸ್ಥರಿಗೆ ಉಚಿತ ಆಹಾರ ಕಿಟ್: ಆರ್.ಅಶೋಕ

ರಾಜ್ಯದಲ್ಲಿ ಪ್ರವಾಹ, ಮಳೆ ಸಂಬಂಧಿತ ಅನಾಹುತಗಳಲ್ಲಿ ಈವರೆಗೂ 73 ಮಂದಿ ಸಾವನ್ನಪ್ಪಿದ್ದಾರೆ. 7,386 ಜನರನ್ನು 75 ಕಾಳಜಿ ಕೇಂದ್ರಗಳಲ್ಲಿ ಇರಿಸಲಾಗಿದ ಎಂದು ಕಂದಾಯ ಸಚಿವ ಆರ್.ಅಶೋಕ ಸೋಮವಾರ ತಿಳಿಸಿದರು.

ಬೆಂಗಳೂರು: ರಾಜ್ಯದಲ್ಲಿ ಪ್ರವಾಹ, ಮಳೆ ಸಂಬಂಧಿತ ಅನಾಹುತಗಳಲ್ಲಿ ಈವರೆಗೂ 73 ಮಂದಿ ಸಾವನ್ನಪ್ಪಿದ್ದಾರೆ. 7,386 ಜನರನ್ನು 75 ಕಾಳಜಿ ಕೇಂದ್ರಗಳಲ್ಲಿ ಇರಿಸಲಾಗಿದ ಎಂದು ಕಂದಾಯ ಸಚಿವ ಆರ್.ಅಶೋಕ ಸೋಮವಾರ ತಿಳಿಸಿದರು.

ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ 14 ಜಿಲ್ಲೆಗಳ 161 ಗ್ರಾಮಗಳು ಪ್ರವಾಹ ಭಾದಿತವಾಗಿವೆ. 21, 727 ಜನರು ಪ್ರವಾಹದ ಹೊಡೆತಕ್ಕೆ ಸಿಲುಕಿದ್ದಾರೆ. ಗುಡುಗಿನಿಂದ 15 ಮಂದಿ ಸಾವನ್ನಪ್ಪಿದ್ದು, ಮರ ಬಿದ್ದು ಐವರು, ಮನೆ ಕುಸಿತದಿಂದ 19 ಮಂದಿ ಸಾವನ್ನಪ್ಪಿದ್ದಾರೆ. 24 ಮಂದಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. 9 ಮಂದಿ ಭೂ ಕುಸಿತ, ಹಾಗೂ ಒಬ್ಬರು ವಿದ್ಯುತ್ ಅವಘಡದಿಂದ ಮೃತಪಟ್ಟಿರುವುದಾಗಿ ತಿಳಿಸಿದರು.

8,197ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. 75 ಕಾಳಜಿ ಕೇಂದ್ರಗಳಲ್ಲಿ 7,386 ಜನರು ತಂಗಿದ್ದಾರೆ. 666 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದರೆ, 2,949 ಮನೆಗಳು ತೀವ್ರವಾಗಿ ಹಾಗೂ 17, 750 ಮನೆಗಳು ಭಾಗಶ:ವಾಗಿ ಹಾನಿಯಾಗಿವೆ. 1,29,087 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆ, 7,942 ಹೆಕ್ಟೇರ್ ಪ್ರದೇಶದ ತೋಟಗಾರಿಕೆ ಬೆಳೆ ನಷ್ಟವಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಈ ವರ್ಷ 11,768 ಕಿಲೋ ಮೀಟರ್ ರಸ್ತೆ, 1,152 ಸೇತುವೆಗಳು, 122 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 2,249 ಅಂಗನವಾಡಿ ಕೇಂದ್ರಗಳು ಹಾಗೂ 95 ನೀರಾವರಿ ಕೊಳಗಳು ಹಾನಿಯಾಗಿವೆ. ತೀವ್ರಗತಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪರಿಹಾರ ಕಾರ್ಯ ಕೈಗೊಳ್ಳಲು ಜಿಲ್ಲೆಗಳಲ್ಲಿ 857 ಕೋಟಿ ಲಭ್ಯವಿದೆ ಎಂದು ತಿಳಿಸಿದರು.

ಪ್ರವಾಹ ಸಂಬಂಧಿತ ಅನಾಹುತಗಳಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ.ಇದರಲ್ಲಿ 4 ಲಕ್ಷ ರೂಪಾಯಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು ಸಹ ಒಳಗೊಂಡಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯದಲ್ಲಿ ಭಾರೀ ಮಳೆಯಿಂದ ಮನೆ ಕಳೆದುಕೊಂಡು ಕಾಳಜಿ ಕೇಂದ್ರ ಮತ್ತು ನೆಂಟರಿಷ್ಟರ ಮನೆಯಲ್ಲಿರುವ ಸಂತ್ರಸ್ಥರಿಗೆ ಅಗತ್ಯ ದಿನ ಬಳಕೆ ವಸ್ತುಗಳನ್ನೂಳಗೊಂಡ ಕಿಟ್ ಗಳನ್ನು ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಳೆ ಹಾನಿ ಕುರಿತು ಸ್ಪಷ್ಟನೆ ನೀಡಿದ ಅಶೋಕ್, ಈ ಕಿಟ್ ನಲ್ಲಿ 10 ಕೆಜಿ ಅಕ್ಕಿ, ಒಂದು ಕೆಜಿ ತೊಗರಿಬೇಳೆ, ಒಂದು ಲೀಟರ್ ಅಡುಗೆ ಎಣ್ಣೆ, ಒಂದು ಕೆಜಿ ಉಪ್ಪು, ಒಂದು ಕೆಜಿ ಸಕ್ಕರೆ, 100 ಗ್ರಾಂ ಖಾರದ ಪುಡಿ, ಟೀ ಪುಡಿ, ಅರಿಶಿನಪುಡಿ ಹೀಗೆ ದಿನ ಬಳಕೆ ವಸ್ತುಗಳು ಇರುತ್ತವೆ. ಈ ಕಿಟ್ ನ ಬೆಲೆ 1 ಸಾವಿರ ರೂಪಾಯಿ ಆಗಿದ್ದು ಎಲ್ಲ ಸಂತ್ರಸ್ಥ ಕುಟುಂಬಗಳಿಗೆ ಉಚಿತವಾಗಿ ನೀಡಲಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT