ಆರ್‌.ಅಶೋಕ್‌ 
ರಾಜ್ಯ

ರಾಜ್ಯದಲ್ಲಿ ಗಣೇಶೋತ್ಸವ ನಿರ್ಬಂಧ ರದ್ದು: ಕಂದಾಯ ಸಚಿವ ಆರ್ ಅಶೋಕ್

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕೋವಿಡ್ ಸಮಯದಲ್ಲಿದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವರು, ಗಣೇಶೋತ್ಸವ ಆಚರಣೆಗೆ ಯಾವುದೇ ಇತಿ ಮಿತಿಯಾಗಲೀ, ನಿರ್ಬಂಧವಾಗಲೀ ಇರುವುದಿಲ್ಲ. ಬೆಂಗಳೂರು ನಗರದಲ್ಲಿ ವಾರ್ಡ್‌ಗೆ ಒಂದು ಗಣೇಶ ಕೂರಿಸಬೇಕು ಎಂಬ ಮಹಾನಗರ ಪಾಲಿಕೆ ನಿಯಮಗಳ ಬಗ್ಗೆ ಸ್ಪಷ್ಟನೆ ನೀಡಿ, ಈ ಹಿಂದೆ ಕೋವಿಡ್ ಇದ್ದ ಕಾರಣ ಗಣೇಶೋತ್ಸವ ಆಚರಣೆಗೆ ಮಿತಿ ಹೇರಲಾಗಿತ್ತು. ಈಗ ಆ ರೀತಿಯ ಯಾವುದೇ ನಿಯಮಗಳು ಇಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದರು.

ಈ ಬಾರಿ ಸಾರ್ವಜನಿಕ ಗಣೇಶೋತ್ಸವವನ್ನು ಕೋವಿಡ್ ಪೂರ್ವದಲ್ಲಿ ಯಾವ ರೀತಿ ಬೀದಿಗಳಲ್ಲಿ ಆಚರಿಸುತ್ತಿದ್ದರೋ ಆ ರೀತಿ ಆಚರಿಸಬಹುದು. ರಸ್ತೆಗೊಂದು, ವಾರ್ಡ್‌ಗೊಂದು, ಬೀದಿಗೊಂದು ಎಂಬ ನಿಯಮಗಳು ಇರುವುದಿಲ್ಲ ಎಂದರು.

ಗಣೇಶೋತ್ಸವ ಸಂದರ್ಭದಲ್ಲಿ ಪ್ಲಾಸ್ಟಿಕ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶಮೂರ್ತಿ ಕೂರಿಸಲು ಆವಕಾಶವಿಲ್ಲ. ಪರಿಸರ ಪ್ರೇಮಿ ಮಣ್ಣಿನ ಗಣೇಶ ಮೂರ್ತಿಗಳನ್ನು ಕೂರಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT