ಕಾರಿಗೆ ಢಿಕ್ಕಿ ಹೊಡೆದು ಎಳೆದೊಯ್ದ ಟ್ರಕ್ 
ರಾಜ್ಯ

ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ ಹೊಡೆದು 500 ಮೀಟರ್ ವರೆಗೆ ಎಳೆದೊಯ್ದ ಟ್ರಕ್! ವಿಡಿಯೋ...

ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು 500 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ.

ಮೈನ್‌ಪುರಿ: ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು 500 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ.

ದೇವೇಂದ್ರ ಸಿಂಗ್ ಯಾದವ್ ಈ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದು, ಭಾನುವಾರ ರಾತ್ರಿ ಅಪಘಾತದ ವೇಳೆ ಅವರು ಕಾರಿನಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ. ಅದೃಷ್ಟವಶಾಕ್ ಅವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎನ್ನಲಾಗಿದೆ.

ಈ ಸಂಬಂಧ ದೂರು ದಾಖಲಾಗಿದ್ದು, ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಮಣಿಪುರ ಎಸ್ಪಿ ಕಮಲೇಶ್ ದೀಕ್ಷಿತ್ ತಿಳಿಸಿದ್ದಾರೆ. 

ಏನಿದು ಘಟನೆ?
ಉತ್ತರ ಪ್ರದೇಶದ ಮೈನ್‌ಪುರಿಯ ಕರ್ಹಾಲ್ ರಸ್ತೆ ಮೂಲಕ ದೇವೇಂದ್ರ ಸಿಂಗ್ ಯಾದವ್ ಅವರು ತಮ್ಮ ನಿವಾಸಕ್ಕೆ ಹೋಗುತ್ತಿದ್ದರು. ಈ ವೇಳೆ ಮೈನ್‌ಪುರಿ ಸದರ್ ಕೊಟ್ವಾಲಿ ಪ್ರದೇಶದ ಭದಾವರ್ ಹೌಸ್ ಎದುರು ಯಾದವ್ ಕಾರಿಗೆ ಟ್ರಕ್ ಒಂದು ಢಿಕ್ಕಿ ಹೊಡೆದಿದೆ. ಮಾತ್ರವಲ್ಲದೇ ಅವರ ಕಾರನ್ನು ಸುಮಾರು 500 ಮೀಟರ್ ವರೆಗೂ ಎಳೆದೊಯ್ದಿದೆ. ಈ ಘಟನೆಗೆ ಸಾಕ್ಷಿಯಾಗಿದ್ದ ಸ್ಥಳೀಯರು ಕಾರಿನ ಹಿಂದೆಯೇ ಓಡಿ ದೇವೇಂದ್ರ ಸಿಂಗ್ ಯಾದವ್ ಅವರನ್ನು ರಕ್ಷಿಸಿದ್ದಾರೆ. ಪ್ರಸ್ತುತ ಯಾದವ್ ಅವರು ಮೈನ್‌ಪುರಿ ಸದರ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಮೈನ್‌ಪುರಿಯನ್ನು ಸಮಾಜವಾದಿ ಪಕ್ಷದ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಪುತ್ರ ಅಖಿಲೇಶ್ ಯಾದವ್ ಮೈನ್‌ಪುರಿಯೊಂದಿಗೆ ಆಳವಾದ ಬಾಂಧವ್ಯವನ್ನು ಹೊಂದಿದ್ದಾರೆ. ಅಖಿಲೇಶ್ ಯಾದವ್ ಅವರು ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. ಸಮಾಜವಾದಿ ಪಕ್ಷದ ರಾಜಕೀಯ ಪ್ರಾರಂಭದಲ್ಲಿ ಮೈನ್‌ಪುರಿಯು ಅತ್ಯಂತ ವಿಶಿಷ್ಟವಾದ ಕೊಡುಗೆಯನ್ನು ಹೊಂದಿದೆ. ಮುಲಾಯಂ ಸಿಂಗ್ ಮತ್ತು ಅಖಿಲೇಶ್ ಅವರೊಂದಿಗಿನ ಸಂಬಂಧದಿಂದಾಗಿ, ಇದು ರಾಜ್ಯದ ವಿಐಪಿ ಕ್ಷೇತ್ರಗಳಲ್ಲಿ ಒಂದಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT