ಡಿಟಿಡಿಸಿ 
ರಾಜ್ಯ

ಬೆಂಗಳೂರು: ವಿವಾಹಕ್ಕಾಗಿ ನಿಗದಿತ ಸಮಯಕ್ಕೆ ಡೆಲಿವರಿ ಆಗದ ಸೂಟ್, ದುಬಾರಿ ಬೆಲೆ ತೆರಬೇಕಾಯ್ತು ಡಿಟಿಡಿಸಿ!

ನಗರದ ಯುವಕನೋರ್ವ ದೂರದ ಊರಿನಲ್ಲಿ ವಿವಾಹವಾಗುತ್ತಿದ್ದ ತನ್ನ ಸ್ನೇಹಿತನಿಗೆ ಡಿಟಿಡಿಸಿ ಎಕ್ಸ್ ಪ್ರೆಸ್ ಮೂಲಕ ಉಡುಗೊರೆಯಾಗಿ ಕಳಿಸಿದ್ದ ಸೂಟ್ ನಿಗದಿತ ಸಮಯಕ್ಕೆ ತಲುಪದೇ ಆತನಿಗೆ ತೀವ್ರ ಮುಜುಗರವಾಗಿದ್ದು ಸಂಸ್ಥೆ ದುಬಾರಿ ಬೆಲೆ ತೆರಬೇಕಾಗಿ ಬಂದಿದೆ. 

ಬೆಂಗಳೂರು: ನಗರದ ಯುವಕನೋರ್ವ ದೂರದ ಊರಿನಲ್ಲಿ ವಿವಾಹವಾಗುತ್ತಿದ್ದ ತನ್ನ ಸ್ನೇಹಿತನಿಗೆ ಡಿಟಿಡಿಸಿ ಎಕ್ಸ್ ಪ್ರೆಸ್ ಮೂಲಕ ಉಡುಗೊರೆಯಾಗಿ ಕಳಿಸಿದ್ದ ಸೂಟ್ ನಿಗದಿತ ಸಮಯಕ್ಕೆ ತಲುಪದೇ ಆತನಿಗೆ ತೀವ್ರ ಮುಜುಗರವಾಗಿದ್ದು ಸಂಸ್ಥೆ ದುಬಾರಿ ಬೆಲೆ ತೆರಬೇಕಾಗಿ ಬಂದಿದೆ. 

ಪ್ರಮೋದ್ ಲೇಔಟ್ ನ ಸಿದ್ದೇಶ ಎಂಬಾತ ಹೈದರಾಬಾದ್ ನಲ್ಲಿ ವಿವಾಹವಾಗುತ್ತಿದ್ದ ತನ್ನ ಆಪ್ತ ಸ್ನೇಹಿತನೋರ್ವನಿಗೆ ಡಿಟಿಡಿಸಿ ಮೂಲಕ ಸೂಟ್ ಉಡುಗೊರೆಯಾಗಿ ಕಳಿಸಿದ್ದ. ಆದರೆ ನಿಗದಿತ ಸಮಯಕ್ಕೆ ಸರಿಯಾಗಿ ಅದು ತಲುಪದ ಕಾರಣ 
ವರ ಸೂಟ್ ಗಾಗಿ ಕೊನೆಯ ಕ್ಷಣದವರೆಗೂ ಪರದಾಡಬೇಕಾಯಿತು. 

ಸಂಸ್ಥೆಯ ನಿರ್ಲಕ್ಷ್ಯತನವನ್ನು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಕೊಂಡೊಯ್ದ ಸಿದ್ದೇಶ ಅವರಿಗೆ ನ್ಯಾಯ ದೊರೆತಿದ್ದು, ನಿರ್ಲಕ್ಷ್ಯತನ ತೋರಿದ ಸಂಸ್ಥೆಗೆ ಹಾಗೂ ಉಳ್ಳಾಲ್ ನಲ್ಲಿರುವ ಅದರ ಶಾಖೆಗೆ ಸೂಟ್ ನ ಮೊತ್ತ 11,495 ರೂಪಾಯಿ, ಜೊತೆಗೆ ವಾರ್ಷಿಕ ಶೇ.10 ರಷ್ಟು ಬಡ್ಡಿ, ಬುಕಿಂಗ್ ಚಾರ್ಜ್ 500 ರೂಪಾಯಿ, ದಾವೆ ವೆಚ್ಚ ಸೇರಿದಂತೆ, 10,000 ರೂಪಾಯಿ ಸೇರಿ ಒಟ್ಟು 25,000 ರೂಪಾಯಿಗಳನ್ನು ನೀಡಬೇಕೆಂದು ಬೆಂಗಳೂರು ನಗರ ಎರಡನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಡಿಟಿಡಿಸಿ ಗೆ ನಿರ್ದೇಶನ ನೀಡಿದೆ. 

ಸರಕನ್ನು ನಿಗದಿತ ಸಮಯಕ್ಕೆ ತಲುಪಿಸಲು ಸಾಧ್ಯಾವಗದೇ ಇರುವುದು ದೂರುದಾರರ ಘನತೆಗೆ ಹಾನಿ ಉಂಟುಮಾಡಿದ್ದು, ತೀವ್ರ ಮುಜುಗರ ಎದುರಿಸಿದ್ದಾರೆ ಎಂದು ಆಯೋಗ ಹೇಳಿದೆ.

ಸಿದ್ದೇಶ (ದೂರುದಾರ) ಹಾಗೂ ಮನೀಷ್ ವರ್ಮಾ(ವರ) ಸಹೋದ್ಯೋಗಿಗಳಾಗಿದ್ದರು ನಂತರ 2017 ರ ವೇಳೆಗೆ ಆಪ್ತ ಸ್ನೇಹಿತರಾಗಿದ್ದು, ಸಿದ್ದೇಶ ಮನೀಷ್ ವರ್ಮಾ ಅವರ ವಿವಾಹಕ್ಕೆ ಸೂಟ್ ಉಡುಗೊರೆ ನೀಡುವುದಾಗಿ ಹೇಳಿದ್ದರು.
 
ಡಿ.1, 2019 ರಂದು ಹೈದರಾಬಾದ್ ನಲ್ಲಿ ವಿವಾಹವಾಗುತ್ತಿದ್ದ ವರ್ಮಾಗೆ ಸಿದ್ದೇಶ 2019 ರ ನ.25 ರಂದು ಸೂಟ್ ನ್ನು ಡಿಟಿಡಿಸಿ ಮೂಲಕ ಕೊರಿಯರ್ ಮಾಡಿದ್ದಾರೆ. ಆದರೆ ಅದು ತಲುಪಲಿಲ್ಲ. ಕೊನೆಗೆ ಕೊರಿಯರ್ ಮಾಡಲಾಗಿದ್ದ ಸೂಟ್ ಕಳೆದುಹೋಗಿದೆ, ಇದು ತಮ್ಮ ನಿಯಂತ್ರಣದಲ್ಲಿರಲಿಲ್ಲ, "ಭಗವಂತನ ಕ್ರಿಯೆ" ಎಂದು ಡಿಟಿಡಿಸಿ ಸಮಜಾಯಿಷಿ ನೀಡಿತ್ತು. ಅಷ್ಟೇ ಅಲ್ಲದೇ ಕೊರಿಯರ್ ನಲ್ಲಿದ್ದ ಸರಕಿನ ಮೌಲ್ಯವನ್ನು ದೂರುದಾರರು ಘೋಷಿಸಿಲ್ಲ. ಅಷ್ಟೇ ಅಲ್ಲದೇ ರಿಸ್ಕ್ ಸರ್ಚಾರ್ಜ್ ನ್ನು ಪಾವತಿಸಿಲ್ಲ ಬುಕ್ಕಿಂಗ್ ವೇಳೆ ಹೆಚ್ಚುವರಿ ಪ್ರೀಮಿಯಂ ನ್ನು ಪಾವತಿಸಿಲ್ಲ ಆದ್ದರಿಂದ ತಾವು ದೂರುದಾರರಿಗೆ ಯಾವುದೇ ಪರಿಹಾರ ನೀಡಬೇಕಿಲ್ಲ ಎಂಬ ಉದ್ಧಟತನವನ್ನೂ ಡಿಟಿಡಿಸಿ ತೋರಿತ್ತು. 

ಆದರೆ ಈ ಯಾವುದೇ ವಾದವನ್ನೂ ಆಲಿಸದ ಆಯೋಗ ರಿಸ್ಕ್ ಸರ್ಚಾರ್ಜ್ ಸ್ವೀಕರಿಸದಂತೆ ನಿಮ್ಮನ್ನು ಯಾರೂ ತಡೆದಿರಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT