ಅಶೋಕಾ 
ರಾಜ್ಯ

ಈದ್ಗಾ ಮೈದಾನ ವಿವಾದ: ಧಾರ್ಮಿಕ ಆಚರಣೆಗೆ ಅನುಮತಿ ನೀಡುವುದನ್ನು ಕಂದಾಯ ಇಲಾಖೆ ನೋಡಿಕೊಳ್ಳುತ್ತದೆ- ಜಮೀರ್ ಗೆ ಅಶೋಕ್ ತಿರುಗೇಟು

ಚಾಮರಾಜಪೇಟೆಯ ಮೈದಾನ ಕಂದಾಯ ಆಸ್ತಿಯಾಗಿದ್ದು ಇಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ವಿವಿಧ ಉತ್ಸವಗಳಿಗೆ ಅನುಮತಿ ನೀಡುವುದು, ಬಿಡುವುದು ಕಂದಾಯ ಇಲಾಖೆ ನೋಡಿಕೊಳ್ಳುತ್ತದೆ ಎಂದು ಸಚಿವ ಆರ್ ಅಶೋಕ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಚಾಮರಾಜಪೇಟೆಯ ಮೈದಾನ ಕಂದಾಯ ಆಸ್ತಿಯಾಗಿದ್ದು ಇಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ವಿವಿಧ ಉತ್ಸವಗಳಿಗೆ ಅನುಮತಿ ನೀಡುವುದು, ಬಿಡುವುದು ಕಂದಾಯ ಇಲಾಖೆ ನೋಡಿಕೊಳ್ಳುತ್ತದೆ ಎಂದು ಸಚಿವ ಆರ್ ಅಶೋಕ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ತಿರುಗೇಟು ನೀಡಿದ್ದಾರೆ.

ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲು ಇದುವರೆಗೂ ಯಾವುದೇ ಮನವಿ ಬಂದಿಲ್ಲ. ಮನವಿ ಬಂದರೆ ಕಾನೂನು ಚೌಕಟ್ಟಿನಲ್ಲಿ ಎಲ್ಲವನ್ನು ಪರಿಶೀಲಿಸಿ ತೀರ್ಮಾನ ಮಾಡಲಾಗುವುದು ಎಂದು ಅರ್ ಅಶೋಕ್ ಹೇಳಿದ್ದಾರೆ. 

ಸ್ವಾತಂತ್ರ್ಯೋತ್ಸವ ದಿನದಂದು ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿ ಬೇಕಿಲ್ಲ. ಆದರೆ ಕಾನೂನು ಸುವ್ಯವಸ್ಥೆ ಗೊಂದಲ ಇರುವ ಕಡೆ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಹಾರಿಸಲು ಅನುಮತಿ ಬೇಕಾಗುತ್ತದೆ. ಹಾಗಾಗಿ ಚಾಮರಾಜಪೇಟೆ ಮೈದಾನ ಸೇರಿದಂತೆ ಸ್ವಾತಂತ್ರ್ಯ ಆಚರಣೆ ಸಂಬಂಧ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸೂಕ್ತ ತೀರ್ಮಾನ ಮಾಡುತ್ತದೆ ಎಂದರು.

ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್ ಅಹ್ಮದ್ ಖಾನ್, ಈದ್ಗಾ ಮೈದಾನದಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ದಿನ, ಜನವರಿ 26ರಂದು ಗಣರಾಜ್ಯೋತ್ಸವ ವೇಳೆ ತ್ರಿವರ್ಣ ಧ್ವಜಾರೋಹಣ ಹಾಗೂ ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡ ಧ್ವಜಾರೋಹಣಕ್ಕೆ ಮಾತ್ರ ಅವಕಾಶವಿರುತ್ತದೆ. ಆದರೆ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಶಾಸಕ  ಜಮೀರ್ ಅಹ್ಮದ್ ಖಾನ್ ವಿವಾದಕ್ಕೆ ಕಾರಣರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT