ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಿವೃತ್ತ ಶಿಕ್ಷಕಿಯ ಸಿಮ್ ಕದ್ದು 3.45 ಲಕ್ಷ ರು. ಹಣ ಎಗರಿಸಿದ್ದ ಚಾಲಕ ಆರೆಸ್ಟ್

ನಿವೃತ್ತ ಶಿಕ್ಷಕಿಯೊಬ್ಬರ ಸಿಮ್‌ಕಾರ್ಡ್ ಕದ್ದು, ಅದರ ಮೂಲಕ ಬ್ಯಾಂಕ್ ಖಾತೆ ವಹಿವಾಟು ನಡೆಸಿ 3.45 ಲಕ್ಷ ರು ಹಣ ಡ್ರಾ ಮಾಡಿಕೊಂಡು ವಂಚಿಸಿದ್ದ ಆರೋಪದಡಿ ಜಿ.ಬಿ. ಪ್ರಕಾಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಿವೃತ್ತ ಶಿಕ್ಷಕಿಯೊಬ್ಬರ ಸಿಮ್‌ಕಾರ್ಡ್ ಕದ್ದು, ಅದರ ಮೂಲಕ ಬ್ಯಾಂಕ್ ಖಾತೆ ವಹಿವಾಟು ನಡೆಸಿ 3.45 ಲಕ್ಷ ರು ಹಣ ಡ್ರಾ ಮಾಡಿಕೊಂಡು ವಂಚಿಸಿದ್ದ ಆರೋಪದಡಿ ಜಿ.ಬಿ. ಪ್ರಕಾಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ದುದ್ದ ಹೋಬಳಿಯ ಗುನ್ನ ನಾಯಕನಹಳ್ಳಿ ನಿವಾಸಿ ಪ್ರಕಾಶ್,  ಬಂಧಿತ ಆರೋಪಿ, ನಿವೃತ್ತ ಶಿಕ್ಷಕಿ ತಮ್ಮ ಕಾರು ಚಾಲನೆಗಾಗಿ ಪ್ರಕಾಶ್ ನನ್ನು ನೇಮಿಸಿಕೊಂಡಿದ್ದರು. ಆಕೆ ಬೆಳಗಿನ ಉಪಹಾರ ಸೇವಿಸಲು ಕಾರಿನಲ್ಲಿ ಮೊಬೈಲ್ ಬಿಟ್ಟು ರೆಸ್ಟೋರೆಂಟ್ ಗೆ ತೆರಳಿದ್ದರು. ಈ ವೇಳೆ  ಆಕೆಯ ಮೊಬೈಲ್ ನಲ್ಲಿದ್ದ ಸಿಮ್ ಕದ್ದು ಬೇರೊಂದು ಡ್ಯೂಪ್ಲಿಕೇಟ್ ಸಿಮ್ ಹಾಕಿದ್ದ.

‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಲ್ಲಿ ಖಾತೆ ಹೊಂದಿರುವ ದೂರುದಾರರು, ಖಾತೆಗೆ ತಮ್ಮ ಮೊಬೈಲ್ ಸಂಖ್ಯೆ ಜೋಡಿಸಿದ್ದರು. ಅದೇ ಸಂಖ್ಯೆ ಮೂಲಕ ಹಣದ ವಹಿವಾಟು ನಡೆಸುತ್ತಿದ್ದರು. ಇದನ್ನು ತಿಳಿದಿದ್ದ ಆರೋಪಿ, ಸಂಚು ರೂಪಿಸಿ ಖಾತೆಯಿಂದ ಹಣ ದೋಚಿದ್ದ’

‘ಕದ್ದ ಸಿಮ್‌ ಕಾರ್ಡ್ ಬೇರೊಂದು ಮೊಬೈಲ್‌ಗೆ ಹಾಕಿದ್ದ ಆರೋಪಿ, ದೂರುದಾರರ ಖಾತೆ ವ್ಯವಹಾರ ನಡೆಸಿದ್ದ. ಒನ್‌ ಟೈಂ ಪಾಸ್‌ವರ್ಡ್ (ಒಟಿಪಿ) ಸಹ ಅದೇ ಮೊಬೈಲ್‌ಗೆ ಬಂದಿದ್ದು. ಅದನ್ನು ದಾಖಲಿಸಿ  3.45 ಲಕ್ಷ ರು. ಡ್ರಾ ಮಾಡಿಕೊಂಡಿದ್ದ’ ಎಂದು ತಿಳಿಸಿದ್ದಾರೆ.

ದ್ವಿಚಕ್ರ ವಾಹನ ಖರೀದಿ: ‘ವಂಚನೆಯಿಂದ ಬಂದ ಹಣದಲ್ಲೇ ಆರೋಪಿ, ದ್ವಿಚಕ್ರ ವಾಹನ ಖರೀದಿಸಿದ್ದ. 1.30 ಲಕ್ಷ ತನ್ನ ಖಾತೆಯಲ್ಲೇ ಇಟ್ಟುಕೊಂಡಿದ್ದ. ಆರೋಪಿಯನ್ನು ಬಂಧಿಸುತ್ತಿದ್ದಂತೆ ದ್ವಿಚಕ್ರ ವಾಹನ, ಬೈಕ್ ಹಾಗೂ ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ. ಖಾತೆ ವಹಿವಾಟು ಸ್ಥಗಿತಗೊಳಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ಆಕೆ ತನ್ನ ಸಿಮ್ ಕಾರ್ಡ್ ಆ್ಯಕ್ಟಿವೇಟ್ ಮಾಡಿಸಿದ ನಂತರ ಹಣ ಡ್ರಾ ಆಗಿರುವ ಬಗ್ಗೆ ಮೆಸೇಜ್ ಬಂದಿದ್ದವು.

ನನ್ನ ತಾಯಿ ಯಾವುದೇ ಯುಪಿಐ ಖಾತೆಗಳನ್ನು ಹೊಂದಿಲ್ಲ ಅಥವಾ ಯಾವುದೇ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಂಡಿದ್ದಾರೆ ಎಂದು ಸಂತ್ರಸ್ತೆಯ ಮಗ ಹರೀಶ್ ಎಸ್ ಇಟಗಿ ಹೇಳಿದ್ದಾರೆ.  ಆ್ಯಪ್ ಒಂದರ ಮೂಲಕ ಚಾಲಕನನ್ನು ನೇಮಿಸಿಕೊಳ್ಳಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT