ಕಾಲುಸಂಕ ದಾಟುವಾಗ ಕೊಚ್ಚಿಹೋದ ಬಾಲಕಿ ಸನ್ನಿಧಿ 
ರಾಜ್ಯ

ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಪತ್ತೆ

ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಕೊನೆಗೂ ಪತ್ತೆಯಾಗಿದೆ.

ಉಡುಪಿ: ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಕೊನೆಗೂ ಪತ್ತೆಯಾಗಿದೆ.

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನೀರುಪಾಲಾಗಿದ್ದ ಬಾಲಕಿ ಸನ್ನಿಧಿ ಮೃತದೇಹ ಪತ್ತೆಯಾಗಿದೆ. ಘಟನೆ ನಡೆದ ಜಾಗದಿಂದ ಸುಮಾರು 300 ಮೀಟರ್ ದೂರದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.  

ನಿರುಪಾಲಾಗಿದ್ದ ಬಾಲಕಿ ಸನ್ನಿಧಿಗಾಗಿ ಕಳೆದ ಎರಡು ದಿನಗಳಿಂದ ಅಗ್ನಿಶಾಮಕ ದಳ ಮೀನುಗಾರರು ಮತ್ತು ಸ್ಥಳೀಯರಿಂದ ಶೋಧಕಾರ್ಯ ನಡೆಯುತ್ತಿತ್ತು. ಇಂದು (ಆಗಸ್ಟ್​ 10) ಸನ್ನಿಧಿ  ಕಾಲು ಜಾರಿಬಿದ್ದ ಸ್ಥಳದಲ್ಲೇ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ್ದ ಉಸ್ತುವಾರಿ ಸಚಿವ ಅಂಗಾರ ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ್ದರು.

ಏನಿದು ಘಟನೆ?
ಅಗಸ್ಟ್ 8 ರಂದು ಕಾಲು ಸಂಕ ದಾಟುವಾಗ 2ನೇ ತರಗತಿಯ ವಿದ್ಯಾರ್ಥಿನಿ ಕಾಲು ಜಾರಿ ನೀರಿಗೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿತ್ತು. ಚಪ್ಪರಿಕೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ 7 ವರ್ಷದ ಸನ್ನಿಧಿಗಾಗಿ ಹುಡುಕಾಟ ನಡದಿತ್ತು. ಸನ್ನಿಧಿ ಶಾಲೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ದುರಂತ ಸಂಭವಿಸಿತ್ತು. 

ನೀರುಪಾಲಾದ ವಿದ್ಯಾರ್ಥಿನಿ ಸನ್ನಿಧಿ ಬೊಳಂಬಳ್ಳಿ ಗ್ರಾಮದ ನಿವಾಸಿಯಾಗಿದ್ದು, ಮಕ್ಕಿಮನೆ ಪ್ರದೀಪ್ ಪೂಜಾರಿ, ಸುಮಿತ್ರಾ ದಂಪತಿ ಪುತ್ರಿ. ಬಾಲಕಿ ನಿವಾಸಕ್ಕೆ ಶಾಸಕ ಸುಕುಮಾರ್ ಶೆಟ್ಟಿ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ತಲೆದೋರಿದ್ದು, ಅನೇಕ ಕಡೆಗಳಲ್ಲಿ ಹಾನಿಗಳು ಉಂಟಾಗಿವೆ. ಅದರಂತೆ 60ಕ್ಕೂ ಹೆಚ್ಚು ನಾಡದೋಣಿಗಳು ಶಿಥಿಲಗೊಂಡಿರುವ ಕಳುಹಿತ್ಲು ಪ್ರದೇಶಕ್ಕೂ ಜಿಲ್ಲಾಧಿಕಾರಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿ, ಈಗಾಗಲೇ ಸಂಭವಿಸಿದ ನಷ್ಟದ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಸೂಕ್ತ ಪರಿಹಾರ ಒದಗಿಸುವ ಪ್ರಯತ್ನ ನಡೆಸುವುದಾಗಿ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT